- Advertisement -
- Advertisement -


ಮುಂಬೈ: ಒಂಭತ್ತು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಅರಬ್ಬೀ ಸಮುದ್ರದ ಮೇಲೆ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತೈಲ ಮತ್ತು ನೈಸರ್ಗಿಕ ಅನಿಲ ಲಿಮಿಟೆಡ್ (ONGC) ಟ್ವೀಟ್ ಮೂಲಕ ತಿಳಿಸಿದೆ. ಸದ್ಯಕ್ಕೆ ನಾಲ್ವರನ್ನು ರಕ್ಷಿಸಲಾಗಿದ್ದು, ಉಳಿದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದೆ.
ಒಎನ್ಜಿಸಿ ಸಂಸ್ಥೆಯ ಸಿಬ್ಬಂದಿ ಈ ಹೆಲಿಕಾಪ್ಟರ್ನಲ್ಲಿ ಕಾರ್ಯ ನಿಮಿತ್ತ ತೆರಳಿದ್ದರು. ಈ ವೇಳೆ ಹೆಲಿಕಾಪ್ಟರ್ನಲ್ಲಿ ತಾಂತ್ರಿ ಕ ದೋಷ ಕಂಡುಬಂದಿದ್ದರಿಂದ ತಕ್ಷಣವೇ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ ಎಂದು ಸಂಸ್ಥೆ ಹೇಳಿದೆ.


- Advertisement -