- Advertisement -
- Advertisement -


ಬೆಂಗಳೂರು: ಆಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ಬೆಂಗಳೂರಿನ ಐವರು ಪೊಲೀಸರು ರಕ್ತದಾನ ಮಾಡಿದ್ದಾರೆ. ಏಪ್ರಿಲ್ 28ರಂದು ಕಾಮಾಕ್ಷಿಪಾಳ್ಯದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿ ಮೇಲೆ ನಾಗೇಶ್ ಅಲಿಯಾಸ್ ನಾಗ ಎಂಬಾತ ದಾಳಿ ನಡೆಸಿದ್ದನು.
ಆಸಿಡ್ ದಾಳಿಗೆ ಒಳಗಾಗಿದ್ದಂತೆ ಸಂತ್ರಸ್ತೆಗೆ ಮೂರು ಸರ್ಜರಿ ನಡೆದಿದ್ದು, ಈ ವೇಳೆ ರಕ್ತದಾನ ಮಾಡಿದ್ದಾರೆ. ಪೊಲೀಸ್ ಇನ್ಸ್ ಪೆಕ್ಟರ್ ಎಂ.ಪ್ರಶಾಂತ್, ಪ್ರೊಬೇಷನರಿ ಸಬ್ ಇನ್ಸ್ ಪೆಕ್ಟರ್ ವಿಶ್ವನಾಥ್ ರೆಡ್ಡಿ, ಚಂದ್ರಯ್ಯ, ಮೋಹನ್ ಕುಮಾರ್ ಮತ್ತು ನಟರಾಜ್ ಅವರು ರಕ್ತದಾನ ಮಾಡಿದ್ದಾರೆ. ಒಟ್ಟು ಐದು ಯುನಿಟ್ ರಕ್ತದಾನ ಮಾಡಲಾಗಿದೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ.
ಇನ್ನೂ ಪೊಲೀಸರು ರಕ್ತದಾನ ಮಾಡಿರೋದಕ್ಕೆ ಸೇಂಟ್ ಜಾನ್ಸ್ ಆಸ್ಪತ್ರೆ ವೈದ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯುವತಿಗೆ ಇದುವರೆಗೂ ಮೂರು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶೀಘ್ರದಲ್ಲಿಯೇ ಮತ್ತೊಂದು ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ.
- ವ್ಯಾಪ್ತಿಯ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಅಂತರರಾಜ್ಯ ಕಳ್ಳರ ಬಂಧನ, ₹23.67 ಲಕ್ಷ ಮೌಲ್ಯದ ಸೊತ್ತು ವಶ
- ಅಕ್ರಮ ಗೋಹತ್ಯಾ ಪ್ರಕರಣ, ಮನೆ, ಕೊಟ್ಟಿಗೆ ಸೇರಿದಂತೆ ಕೃತ್ಯ ನಡೆದ ಸ್ಥಳದ ಜಪ್ತಿ
- ದಿ.ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ಎಸ್.ಎಲ್.ವಿ ಬುಕ್ಸ್ ಇಂಡಿಯಾ ಪ್ರೈ.ಲಿ ಸಹಕಾರದಲ್ಲಿ ದ.ಕ.ಜಿ.ಪಂ.ಸ.ಹಿ.ಪ್ರಾ ಶಾಲೆ ನೆಟ್ಟಾರು-ಶಾಲಾ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ
- ಪೋಕ್ಸೋ ಕೇಸ್; ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್
- ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ–ಖ್ಯಾತ ಯೂಟ್ಯೂಬರ್ ಮರಿದಾಸ್ ಪೊಲೀಸ್ ವಶಕ್ಕೆ!


- Advertisement -








