
ಪುತ್ತೂರು ವಿಟ್ಲ ರಸ್ತೆಯ ಕಂಬಳಬೆಟ್ಟುವಿನಿಂದ ಅರ್ಕೆಚ್ಚಾರು, ನೇರ್ಲಾಜೆ, ಮುಂಡ್ರಬೈಲು, ನಾಯ್ತೊಟ್ಟು, ಮತ್ತು ಸೂರ್ಯಕ್ಕೆ ಹೋಗುವ ರಸ್ತೆಯ ದುಸ್ಥಿತಿ ಕಂಡು ಅಲ್ಲಿನ ಗ್ರಾಮಸ್ಥರಿಗೆ ಆತಂಕ ಸೃಷ್ಟಿಯಾಗಿದೆ. ಇಲ್ಲಿ ಅನೇಕ ಮಧ್ಯಮ ವರ್ಗದ ಜನರು ವಾಸಿಸುತ್ತಿದ್ದು, ಸುಮಾರು 400 ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ.

ಒಂದು ವರ್ಷದ ಮೊದಲು ಇಲ್ಲಿನ ಜನರ ಮನವಿಯ ಮೇರೆಗೆ ಶಾಸಕರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಸಂಬಂಧ ಪಟ್ಟಂತೆ ಸ್ಥಳೀಯ ಅಧಿಕಾರಿಗಳನ್ನು ಕರೆಸಿ ತಡೆಗೋಡೆ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಆಶ್ವಾಸನೆ ನೀಡಿ ಒಂದು ವರ್ಷವಾದರೂ ಈ ಬಗ್ಗೆ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಗಮನಹರಿಸಲಿಲ್ಲ. ದಿನಕೂಲಿ ನಡೆಸುತ್ತಿರುವ ಇಲ್ಲಿನ ಸ್ಥಳೀಯರು ಅನೇಕ ಬಾರಿ ಸ್ಥಳೀಯ ಪಂಚಾಯತ್ ಬಳಿ ತಮ್ಮ ಅಳಲನ್ನು ಹೇಳಿಕೊಂಡರೂ ಇದಕ್ಕೆ ಬೇಕಾದ ಯಾವುದೇ ಪರಿಹಾರ ವ್ಯವಸ್ಥೆ ಸಿಗದೆ ನಿರಾಸೆ ಹೊಂದಿದ್ದಾರೆ.

ಈ ರಸ್ತೆಯಲ್ಲಿ ಅನೇಕ ಶಾಲಾ ಮಕ್ಕಳು, ಅಂಗನವಾಡಿ ಪುಟಾಣಿಗಳು ಮತ್ತು ಸಾರ್ವಜನಿಕರು, ವಾಹನ ಸವಾರರು ಹೋಗುವ ರಸ್ತೆಯಾಗಿದ್ದು, ಹೊಳೆ ಬದಿಯಲ್ಲಿ ಕಾಂಕ್ರೀಟ್ ಹಾಕಿದ ರಸ್ತೆ ಸಂಪೂರ್ಣ ಬಿರುಕು ಬಿಟ್ಟಿದ್ದು, ಮಳೆಗಾಲದಲ್ಲಿ ಈ ರಸ್ತೆಯಲ್ಲಿ ಮಕ್ಕಳು ಸೇರಿದಂತೆ ಸಾರ್ವಜನಿಕರು ನಡೆದಾಡಲೂ ಭಯಪಡುವಂತಹ ಪರಿಸ್ಥಿತಿ ಎದುರಾಗಿದೆ. ಶಾಸಕರ ಆಶ್ವಾಸನೆ ಠೊಳ್ಳೆಂದು ಮನಗಂಡ ಇಲ್ಲಿನ ಗ್ರಾಮಸ್ಥರು ಮುಂದಿನ ವಿಧಾನಸಭಾ ಚುಣಾವಣೆಯನ್ನು ಬಹಿಷ್ಕರಿಸುವ ನಿರ್ಧಾರ ಮಾಡಿದ್ದಾರೆ.

“ನಮಗೆ ಯಾವುದೂ ಬೇಡ, ನಮ್ಮ ರಸ್ತೆಗೆ ಯಾರಿಂದಲೂ ಏನೂ ಪ್ರಯೋಜನವಿಲ್ಲ, ಅದಕ್ಕಾಗಿ ನಮಗೆ ಚುನಾವಣೆಯ ಅವಶ್ಯಕತೆಯೂ ಇಲ್ಲ, ಎಂಬುದಾಗಿ ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಭೆ ಸೇರಿದ ಗ್ರಾಮಸ್ಥರು ಅದೇ ಗ್ರಾಮದ ನೇರ್ಲಾಜೆ ನಿವಾಸಿ ಉದ್ಯಮಿ ದಿವಾಕರ ದಾಸ್ರವರನ್ನು ಭೇಟಿ ಮಾಡಿ ತಮ್ಮ ಅಳಲನ್ನು ಹಂಚಿಕೊಂಡಿದ್ದಾರೆ. “ನಮಗೆ ರಾಜಕೀಯದವರ ಮೇಲೆ ವಿಶ್ವಾಸವಿಲ್ಲ, ನೀವೇ ನಮಗೆ ಈ ಕೆಟ್ಟುಹೋದ ರಸ್ತೆಯನ್ನು ದುರಸ್ಥಿ ಮಾಡಿ ಕೊಡಬೇಕೆಂದು ದಿವಾಕರ್ ರಾಸ್ರವರಲ್ಲಿ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ದಿವಾಕರ್ ದಾಸ್ರವರು ಈ ಬಗ್ಗೆ ಪರಿಶೀಲಿಸಿ ಮುಂದಿನ ದಿನಗಳಲ್ಲಿ ನಾನು ನಿಮ್ಮೊಂದಿಗೆ ಸದಾ ಇದ್ದೇನೆ ಎಂಬುದಾಗಿ ಭರವಸೆ ನೀಡಿದ್ದಾರೆ.
- ಭಾರತದ ಜೊತೆ ಶೀಘ್ರವೇ ಬಿಗ್ ಟ್ರೇಡ್ ಡೀಲ್ – ಟ್ರಂಪ್ ಘೋಷಣೆ
- ನೆಲ್ಲಿಕಟ್ಟೆ: ಆಟೋ ರಿಕ್ಷಾದ ಗ್ಲಾಸ್ಗೆ ಹಾನಿಗೊಳಿಸಿದ ವಿಚಾರದಲ್ಲಿ ಮಾತಿನ ಚಕಮಕಿ..!
- ಮಂಜೇಶ್ವರ: ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಪ್ರಕರಣ; ಪರಾರಿಯಾಗಿದ್ದ ಆರೋಪಿ ಮಗ ಅರೆಸ್ಟ್..!
- ಸುಳ್ಯ: ಕಾರು-ಬಸ್ ನಡುವೆ ಅಪಘಾತ..!
- ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಎಲ್ಲ 8 ಮಂದಿ ಆರೋಪಿಗಳು ಎನ್ಐಎ ವಶಕ್ಕೆ
