Sunday, June 29, 2025
spot_imgspot_img
spot_imgspot_img

ಉಡುಪಿ: ರಿಯಲ್‌ ಎಸ್ಟೇಟ್‌ ಉದ್ಯಮಿಯ ಬರ್ಬರ ಹತ್ಯೆ..!!

- Advertisement -
- Advertisement -

ಉಡುಪಿ : ರಿಯಲ್‌ ಎಸ್ಟೇಟ್‌ ನಡೆಸುತ್ತಿದ್ದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಇರಿದು ಕೊಲೆ ಮಾಡಿರುವ ಘಟನೆ ಕಾಪು ಬಳಿಯ ಪಾಂಗಾಳ ಸೇತುವೆಯ ಬಳಿ ನಡೆದಿದೆ. ಭೂ ವ್ಯ ವಹಾರದ ಹಿನ್ನೆ ಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಮೃತರನ್ನು ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ(39) ವರ್ಷದ ಎಂದು ಗುರುತಿಸಲಾಗಿದೆ.

ಪಾಂಗಾಳದಲ್ಲಿ ನೇಮೋತ್ಸದಲ್ಲಿದ್ದ ಶರತ್ ಶೆಟ್ಟಿಯಲ್ಲಿ ಕರೆ ಮಾಡಿ ಪಾಂಗಾಳ ಸೇತುವೆ ಬಳಿ ಬರಲು ಹೇಳಿದ್ದರು. ಅಲ್ಲಿ ಬಂದ ಶರತ್‌ ಜೊತೆಗೆ ಮಾತಿನ ಚಕಮಕಿ ನಡೆದು ದುಷ್ಕರ್ಮಿಗಳು ಡ್ರಾಗರ್‌ನಿಂದ ಹಲ್ಲೆಗೈದು ಪರಾರಿಯಾಗಿದ್ದಾರೆ.

ತೀವ್ರ ರಕ್ತ ಸ್ರಾವದಲ್ಲಿ ಬಿದ್ದಿದ್ದ ಶರತ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ವಾನ ದಳ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ.

- Advertisement -

Related news

error: Content is protected !!