Friday, June 27, 2025
spot_imgspot_img
spot_imgspot_img

ಉಡುಪಿ: ವೃದ್ದನ ಮೇಲೆರಗಿದ ಚಿರತೆ; ಸ್ಥಳಿಯರಲ್ಲಿ ಆತಂಕ.!

- Advertisement -
- Advertisement -
astr

ಉಡುಪಿ: ಉಡುಪಿಯ ಮುಂಡ್ಕೂರು ಮುಲ್ಲಡ್ಕ ಎಂಬಲ್ಲಿ ವೃದ್ದರೋರ್ವ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ.

ಕೃಷ್ಣ ಶೆಟ್ಟಿ ಎಂಬವರು ಮುಲ್ಲಡ್ಕದ ರಾಜಶ್ರೀ ರೈಸ್ ಮಿಲ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಚಿರತೆ ಮೇಲೆರಗಿದೆ. ಗಾಯಗೊಂಡ ‌ ಕೃಷ್ಣ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಕಳೆದ ತಿಂಗಳು ಚಿರತೆಯೊಂದು ಬೋನಿಗೆ ಬಿದ್ದಿದ್ದು, ಪರಿಸರದಲ್ಲಿ ಇನ್ನೆರಡು ಚಿರತೆಗಳು ಓಡಾಡುತ್ತಿವೆ ಅಂತ ಸ್ಥಳಿಯರು ಆತಂಕ ವ್ಯಕ್ತಪಡಿಸಿದ್ದುಚಿರತೆ ‌ಹಿಡಿಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳ ಗ್ರಾಮಸ್ಥರುಆಗ್ರಹಿಸಿದ್ದಾರೆ.

- Advertisement -

Related news

error: Content is protected !!