- Advertisement -
- Advertisement -


ಉಡುಪಿ: ಕಳೆದ 25 ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಬಾರ್ಕೂರಿನ ನಿವಾಸಿ ಬಾಬು ಮರಕಾಲ ಮೃತಪಟ್ಟಿರುವ ವ್ಯಕ್ತಿ. ಬಾಬು ಮರಕಾಲ ಕಳೆದ ತಿಂಗಳೂ ಉಡುಪಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ರು. ಆಗ ಇವರನ್ನು ಸಮಾಜಸೇವಕರಾದ ನಿತ್ಯಾನಂದ ಆಸ್ಪತ್ರೆಗೆ ದಾಖಲಿಸಿದರು. ನಂತರ ಚಿಕಿತ್ಸೆ ಫಲಿಸಿದ ವೃದ್ಧ ಸಾವನ್ನಪ್ಪಿದು, ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ರಕ್ಷಿಸಿಡಲಾಗಿತ್ತು.
ಇದೀಗ ಸಂಬಂಧಿಕರಿಗೆ ಬಾಬು ಮರಕಾಲ ಮೃತಪಟ್ಟಿರುವ ವಿಷಯ ತಿಳಿದುಬಂದಿದೆ. ಆ ಬಳಿಕ ಸಂಬಂಧಿಕರು ಆಸ್ಪತ್ರೆಯನ್ನು ಸಂಪರ್ಕಿಸಿ ಕಾನೂನು ಪ್ರಕ್ರಿಯೆ ಮೂಲಕ ಶವವನ್ನು ಪಡೆದುಕೊಂಡರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯದಿಂದ ಅಂತ್ಯಸಂಸ್ಕಾರವನ್ನೂ ನಡೆಸಿದ್ದಾರೆ. ಇವರು ಕಳೆದ 25 ವರ್ಷಗಳಿಂದ ಯಾವುದೋ ಕಾರಣಕ್ಕೆ ನಾಪತ್ತೆಯಾಗಿದ್ದಾಗಿ ತಿಳಿದುಬಂದಿದೆ.
- ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ ರಚನೆಗೆ ಪೂರ್ವಭಾವಿ ಸಭೆ: 4 ಸಂಘಗಳ ಸ್ಥಾಪನೆಗೆ ಸಿದ್ಧತೆ
- ದ.ಕ.ದಲ್ಲಿ ಭಾರೀ ಮಳೆ ಎಚ್ಚರಿಕೆ: ಆ.8ರಂದು ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ಶಾಲೆ-ಕಾಲೇಜುಗಳಿಗೆ ರಜೆ
- ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣ-ಘಟನೆಯಾದ 3 ದಿನಗಳೊಳಗಾಗಿ ಪ್ರಕರಣ ಭೇದಿಸಿ,ಆರೋಪಿಗಳ ಬಂಧನ
- ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ಆಗಸ್ಟ್ 24ಕ್ಕೆ ಕರಡು, ಅಕ್ಟೋಬರ್ 27ಕ್ಕೆ ಅಂತಿಮ ಪಟ್ಟಿ
- ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ – ಚಾಲಕ ಸ್ಪೋಟ್ ಡೆತ್


- Advertisement -








