Saturday, June 28, 2025
spot_imgspot_img
spot_imgspot_img

ಐದು ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ನೇಣಿಗೆ ಶರಣು

- Advertisement -
- Advertisement -

ಐದು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವವಿವಾಹಿತೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ಅಶ್ವಥ್‌ ನಗರದಲ್ಲಿ ನಡೆದಿದೆ.

ನವ್ಯಶ್ರೀ (23) ನೇಣಿಗೆ ಶರಣಾದ ದುರ್ದೈವಿ. ಇವರು ತಮ್ಮ ಮನೆಯ ಕಾರ್ ಶೆಡ್‌ನಲ್ಲಿ ಶನಿವಾರ ರಾತ್ರಿ ನೇಣಿಗೆ ಶರಣಾಗಿದ್ದಾರೆ.

5 ತಿಂಗಳ ಹಿಂದಷ್ಟೇ ಆಕಾಶ್ ಎಂಬುವರನ್ನು ವಿವಾಹವಾಗಿದ್ದರು. ನಗರದ ಖ್ಯಾತ ವೈದ್ಯೆ ಡಾ. ಜಯಶ್ರೀ ಹೊಮ್ಮರಡಿ ಅವರ ಸೊಸೆಯಾಗಿದ್ದಾರೆ.

ನವ್ಯಶ್ರೀ ಶನಿವಾರ ರಾತ್ರಿ ತುಳಸಿ ಪೂಜೆಯನ್ನು ನೆರವೇರಿಸಿ ಅರಿಶಿನ, ಕುಂಕುಮವನ್ನೂ ಸ್ವೀಕರಿಸಿದ್ದರು ಎನ್ನಲಾಗಿದೆ. ಬಳಿಕ ಕಾರು ಶೆಡ್‌ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಕುಟುಂಬಸ್ಥರರು ಆರೋಪಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ ಮಾಡಲಾಗಿದೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!