- Advertisement -
- Advertisement -



ಕಾರ್ಕಳ: ಇಲ್ಲಿನ ಕುಕ್ಕುಂದೂರು ದುರ್ಗಾನಗರದ ಅಶ್ವಥಕಟ್ಟೆ ಸಮೀಪ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಮೃತರನ್ನು ಮಹಮ್ಮದ್ ರಫೀಕ್ ಎನ್ನಲಾಗಿದೆ.

ರಫೀಕ್ ತನ್ನ ಸಹೋದರ ನಜೀರ್ ಎಂಬವರ ಜೊತೆಗೆ ಓಮಿನಿ ಕಾರಿನಲ್ಲಿ ಉಡುಪಿಯಿಂದ ಮನೆಗೆ ಬರುತ್ತಿದ್ದರು. ದುರ್ಗಾನಗರದ ಅಶ್ವಥಕಟ್ಟೆ ಹತ್ತಿರ ವಾಹನ ನಿಂತಾಗ ಅದರಲ್ಲಿದ್ದ ರಫೀಕ್ ಹೊರಬಂದು ರಸ್ತೆ ದಾಟಲು ಮುಂದಾಗಿದ್ದರು.
ಅದೇ ಸಂದರ್ಭದಲ್ಲಿ ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಮತ್ತೊಂದು ಕಾರು ಇವರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆ ಬಿದ್ದಿದ್ದ ರಫೀಕ್ ಅವರ ತಲೆಯ ಹಿಂಬದಿಗೆ ಗಂಭೀರ ಗಾಯವಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾರು ಚಾಲಕ ಕೆದಿಂಜೆಯ ಅರವಿಂದ ಕಾಮತ್ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -