- Advertisement -
- Advertisement -


ಮಂಡ್ಯ: ಐಟಿಐ ಕಾಲೇಜು ಪ್ರಾಂಶುಪಾಲರಿಗೆ ಜೆಡಿಎಸ್ ಶಾಸಕ ಶ್ರೀನಿವಾಸ್ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಐಟಿಐ ಕಾಲೇಜಿನ ಉನ್ನತೀಕರಿಸಿದ ಕಾಲೇಜು ಉದ್ಘಾಟನೆ ಕಾರ್ಯಕ್ರಮದ ವೇಳೆ ಕಾಲೇಜು ಪ್ರಾಂಶುಪಾಲ ನಾಗಾನಂದ್ ಅವರ ಕಪಾಳಕ್ಕೆ ಶಾಸಕ ಶ್ರೀನಿವಾಸ್ ಹೊಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಾಂಶುಪಾಲರು ಕಾಲೇಜಿನ ವ್ಯವಸ್ಥೆ ಬಗ್ಗೆ ಸರಿಯಾಗಿ ಮಾಹಿತಿ ನೀಡಿಲ್ಲ ಹಾಗೂ ಕಾಲೇಜಿನಲ್ಲಿ ಮೂಲಭೂತ ಸೌಲಭ್ಯ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕೆ ಪ್ರಿನ್ಸಿಪಾಲ್ ಗೆ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಶಾಸಕರ ದರ್ಪ, ದುರಹಂಕಾರಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಾಲೇಜಿನ ಪ್ರಿನ್ಸಿಪಾಲ್ ನಾಗಾನಂದ್ ಮಾತನಾಡಿ ತಪ್ಪು ಮಾಡದೇ ಹೊಡೆಸಿಕೊಂಡೆ. ಯಾಕಾದ್ರೂ ಈ ಕೆಲಸಕ್ಕೆ ಸೇರಿಕೊಂಡೆ ಎಂದು ತನ್ನ ಅಳಲು ತೋಡಿಕೊಂಡಿದ್ದಾರೆ.
- ಉಪ್ಪಿನಂಗಡಿ: ಪಂಜಳದ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ..!
- ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ; ಮೂವರು ಸಾವು, 10 ಮಂದಿಗೆ ಗಾಯ..!
- ಮಂಗಳೂರು: ಬೀಚ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಯುವಕನ ಬಂಧನ..!
- ಮಂಗಳೂರು: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ; ಪ್ರಕರಣ ದಾಖಲು..!
- ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 13 ಸೈನಿಕರು ಸಾವು, 29 ಮಂದಿಗೆ ಗಾಯ

- Advertisement -