Saturday, June 28, 2025
spot_imgspot_img
spot_imgspot_img

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ; 116 ಮಂದಿ ಭಕ್ತರಿಂದ ಎಡೆಮಡೆ ಸ್ನಾನ

- Advertisement -
- Advertisement -

ಸುಬ್ರಹ್ಮಣ್ಯ : ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಪ್ರಯುಕ್ತ 116ಮಂದಿ ಭಕ್ತರಿಂದ ಇಂದು ಎಡೆಮಡೆ ಸ್ನಾನ ನಡೆಯಿತು.

ದೇವರ ನೈವೇದ್ಯದ ಮೇಲೆ ಎಡೆಮಡೆ ಉರುಳು ಸೇವೆಯನ್ನು ಭಕ್ತರು ಇಂದು ನೆರವೇರಿಸಿದರು. ಆಗಮ ಪಂಡಿತ ಮಾರ್ಗದರ್ಶನದಲ್ಲಿ ಎಡೆಮಡೆ ಸ್ನಾನ ಆಚರಣೆ ನಡೆಸಲಾಯಿತು.

ಕ್ಷೇತ್ರದಲ್ಲಿ ಅನಾದಿ ಕಾಲದಿಂದ ನಡೆದುಕೊಂಡು ಬರುತ್ತಿದ್ದಂತಹ ಮಡೆ ಸ್ನಾನಕ್ಕೆ ನ್ಯಾಯಾಲಯ ನಿಷೇಧ ಹೇರಿತ್ತು. ಹಿಂದೆ ಬ್ರಾಹ್ಮಣರು ತಿಂದು ಉಳಿಸಿದಂತಹ ಎಲೆಯ ಮೇಲೆ ಭಕ್ತಾದಿಗಳು ಈ ಸೇವೆಯನ್ನು ನೇರವೇರಿಸುತ್ತಿದ್ದರು. ಆದರೆ ಈ ಸೇವೆಗೆ ಕೆಲವು ವರ್ಷಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು .

ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಈ ಪದ್ಧತಿಯನ್ನು ನಿಷೇಧಗೊಳಿಸಿ ಆದೇಶ ಹೊರಡಿಸಿದ ಬಳಿಕ ಕ್ಷೇತ್ರದಲ್ಲಿ ದೇವರಿಗೆ ನೈವೇಧ್ಯವಿಟ್ಟ ಅನ್ನವನ್ನು ಗೋವುಗಳಿಗೆ ತಿನ್ನಿಸಿದ ಬಳಿಕ ಆ ಎಲೆಯ ಮೇಲೆ ಭಕ್ತಾದಿಗಳು ಉರುಳು ಸೇವೆ ಮಾಡುವ ಎಡೆಮಡೆಸ್ನಾನ ಪದ್ಥ ತಿಯನ್ನು ಆರಂಭಿಸಲಾಯಿತು.

vtv vitla
- Advertisement -

Related news

error: Content is protected !!