Sunday, July 6, 2025
spot_imgspot_img
spot_imgspot_img

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಫೈರಿಂಗ್!

- Advertisement -
- Advertisement -
driving

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಫೈರಿಂಗ್ ಮಾಡಲಾಗಿದ್ದು, ರಾಮಯ್ಯ ಆಸ್ಪತ್ರೆ ಹಿಂಬದಿ ಗೇಟ್ ಬಳಿ ಘಟನೆ ನಡೆದಿದೆ.

ರಾತ್ರಿ 9.30ರ ಸುಮಾರಿಗೆ ಗುಂಡಿನ ದಾಳಿ ನಡೆಸಲಾಗಿದೆ. ಬೈಕ್ ಸವಾರ ಅನಿಲ್ ಎಂಬುವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬೈಕ್ ಮತ್ತು ಆಡಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ.

ಆಡಿ ಕಾರ್ ಚಾಲಕ ತನ್ನ ಬಳಿಯಿದ್ದ ಗನ್ ನಿಂದ ಏಕಾಏಕಿ ಫೈರಿಂಗ್ ಮಾಡಿದ್ದಾನೆ. ಎರಡು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಈ ವೇಳೆ ಅದೃಷ್ಟವಶಾತ್ ಬೈಕ್ ಸವಾರ ಅನಿಲ್ ಪಾರಾಗಿದ್ದಾರೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!