- Advertisement -
- Advertisement -
ಮೈಸೂರು: ಮೈಸೂರು ಹುಣಸೂರು ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಹಾಗೂ ಜೊತೆಯಲ್ಲಿದ್ದ ವ್ಯಕ್ತಿ ಪರಾರಿಯಾಗಿದ್ದಾರೆ. ಯುವತಿಯನ್ನು ಕೊಲೆ ಮಾಡಿ ವ್ಯಕ್ತಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಪ್ರದೀಪ್ ಗುಂಟಿ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಬಂಧ ಮಾತನಾಡಿದ ಮೈಸೂರು ಡಿಸಿಪಿ ಪ್ರದೀಪ್ ಗುಂಟಿ, ಯುವತಿ ಸಾವನ್ನಪ್ಪಿರುವ ಬಗ್ಗೆ ಹೋಟೆಲ್ ನ ಆಡಳಿತ ಮಂಡಳಿಯವರು ಕರೆ ಮಾಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಯುವತಿಯ ಗುರುತು ಪತ್ತೆಯಾಗಿದೆ. 21 ವರ್ಷದ ಯುವತಿ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರನ್ನು ಕರೆಸಿದ್ದೇವೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗುವುದು. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣವೇನೆಂದು ತಿಳಿಯಲಿದೆ ಎಂದು ಮಾಹಿತಿ ನೀಡಿದರು.


- Advertisement -








