- Advertisement -
- Advertisement -


ಕಾಸರಗೋಡು: ಗುಂಡೇಟು ತಗುಲಿ ಸಿಪಿಐ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೊಯಿನಾಚಿ ಕರಿಚ್ಚೇರಿಯಲ್ಲಿ ನಡೆದಿದೆ.
ಕರಿಚ್ಚೇರಿ ಯ ಮಾಧವನ್ (65) ಮೃತಪಟ್ಟವರು. ಹಲಸು ಕೊಯ್ಯಲು ಹಿತ್ತಿಲಿಗೆ ತೆರಳಿದ್ದ ಮಾಧವನ್ ರವರು ನೆಲದಲ್ಲಿಟ್ಟಿದ್ದ ಕೋವಿಯನ್ನು ಮೆಟ್ಟಿದಾಗ ಗುಂಡು ಕಾಲಿಗೆ ತಗಲಿದೆ.

ಕಾಡುಹಂದಿಗೆ ಗುರಿ ಇಟ್ಟು ಈ ಕೋವಿಯನ್ನು ಪರಿಸರವಾಸಿಯೊಬ್ಬರು ಹಿತ್ತಿಲಿನಲ್ಲಿ ತಂದಿಟ್ಟಿದ್ದರು ಎನ್ನಲಾಗಿದೆ. ಘಟನೆ ನಡೆದ ಗಂಟೆಗಳ ಬಳಿಕ ಇದು ಮನೆಯವರ ಗಮನಕ್ಕೆ ಬಂದಿದೆ . ಕೂಡಲೇ ಕಾಸರಗೋಡು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ . ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- ಭಾವಿ ಪತ್ನಿಯೊಂದಿಗೆ ಚಾರಣಕ್ಕೆ ತೆರಳಿದ್ದ ಯುವಕ ಫೋಟೊ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದು ಮೃತ್ಯು
- ಏರ್ಟೆಲ್ ಸಿಮ್ ಇದ್ದರೆ ಗೃಹಲಕ್ಷ್ಮೀ ₹2 ಸಾವಿರಕ್ಕೆ ಖೋತಾ?- ಇತರೆ ರಾಜ್ಯಗಳ ಖಾತೆಗಳಿಗೆ ಹಣ ವರ್ಗಾವಣೆ ಆರೋಪ-ಏರ್ಟೆಲ್ ಆ್ಯಪ್ ಖಾತೆಗಳ ಮೇಲೆ ಸರ್ಕಾರದ ಕಣ್ಣು-ಕ್ರಮಕ್ಕೆ ಸಿಎಂ ಸೂಚನೆ
- ಪಾರ್ಟ್ಟೈಮ್ ಕೆಲಸದ ಆಮಿಷ: ಹಣ ಪಡೆದು ವಂಚನೆ; ಪ್ರಕರಣ ದಾಖಲು
- ಒಂದೇ ಕ್ಷಣದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬ; ಕೆರೆಗೆ ಬಿದ್ದು ಅವಳಿ ಮಕ್ಕಳ ಸಾವು
- ದಾಖಲೆ ಇಲ್ಲದೇ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್: ಎಂಆರ್ಪಿಎಲ್ ಉದ್ಯೋಗಿ ಸೇರಿ ಇಬ್ಬರ ವಿರುದ್ಧ ಎಫ್ಐಆರ್, ಇಬ್ಬರು ಕಾನ್ಸ್ಟೇಬಲ್ ಅಮಾನತು



- Advertisement -







