- Advertisement -



- Advertisement -
ಪುಂಜಾಲಕಟ್ಟೆ: ದನದ ಮಾಂಸ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪುಂಜಾಲಕಟ್ಟೆ ಎಸ್. ಐ.ಸುತೇಶ್ ನೇತೃತ್ವದ ಪೋಲಿಸರ ತಂಡ ಆರೋಪಿ, ಬೈಕ್ ಸಹಿತ ಮಾಂಸವನ್ನು ವಶಕ್ಕೆ ಪಡೆದುಕೊಂಡ ಘಟನೆ ಪಾಂಡವರಕಲ್ಲು ಸಮೀಪದ ಕೂದೂರು ಎಂಬಲ್ಲಿ ನಡೆದಿದೆ.
ಪಾಂಡವರಕಲ್ಲು ನಿವಾಸಿ ಇಸ್ಮಾಯಿಲ್ ಎಂಬಾತನನ್ನು ಬಂಧಿಸಿದ್ದು, ಸ್ಥಳದಲ್ಲಿದ್ದ ಸುಮಾರು ಒಂದು ಲಕ್ಷ ಮೌಲ್ಯದ ಬೈಕ್ ಹಾಗೂ ದನದ ಮಾಂಸವನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
ಆರೋಪಿ ಇಸ್ಮಾಯಿಲ್ ಅವರು ಮನೆಯ ಹಿಂಬದಿಯಲ್ಲಿರುವ ಅಕ್ರಮ ಕಟ್ಟಡದಲ್ಲಿ ಪರವಾನಗಿ ರಹಿತವಾಗಿ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಆಧಾರಿಸಿ ದಾಳಿ ನಡೆಸಿದ್ದಾರೆ. ದಾಳಿಯ ಸ್ಥಳದಲ್ಲಿ ಇದ್ದ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿ ಮೇಲೆ ಗೋ ವಧೆ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

- Advertisement -