- Advertisement -
- Advertisement -



ಪುತ್ತೂರು: ಆಟೋ ರಿಕ್ಷಾ ಚಾಲಕರೊಬ್ಬರಿಗೆ ತಂಡವೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಅ.19ರಂದು ತಡರಾತ್ರಿ ಗಡಿಪಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹಲ್ಲೆಗೊಳಗಾದ ವ್ಯಕ್ತಿ ನರಿಮೊಗರು ಗ್ರಾಮದ ವೀರಮಂಗಲ ನಿವಾಸಿ ರಿಕ್ಷಾ ಚಾಲಕ ಚೇತನ್ ಯಾನೆ ಲಕ್ಷ್ಮಣ್ ಎಂದು ತಿಳಿದುಬಂದಿದೆ. ಇವರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು.

ರಾತ್ರಿ ವೇಳೆ ತನ್ನ ರಿಕ್ಷಾದಲ್ಲಿ ಮನೆಗೆ ಹೋಗುತ್ತಿದ್ದಾಗ ಗಡಿಪಿಲ ರೈಲ್ವೇ ಗೇಟ್ ಬಳಿ ಆಕ್ಟೀವಾ ಮತ್ತು ಬೈಕ್ನಲ್ಲಿ ಬಂದ ತಂಡವೊಂದು ರಿಕ್ಷಾವನ್ನು ನಿಲ್ಲಿಸಿ ಚಾಲಕ ಲಕ್ಷ್ಮಣ್ ಅವರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಹಲ್ಲೆ ನಡೆಸಿದವರ ಪೈಕಿ ಓರ್ವನ ಮಾಹಿತಿ ಇದೀಗ ಪೊಲೀಸರಿಗೆ ಲಭ್ಯವಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.



- Advertisement -