Saturday, June 28, 2025
spot_imgspot_img
spot_imgspot_img

ಪುತ್ತೂರು: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಚಂದ್ರಹಾಸ ಶೆಟ್ಟಿ ಅವರ ಕಾಲರ್ ಹಿಡಿದ ಸ್ವ ಪಕ್ಷದ ಕಾರ್ಯಕರ್ತರು..! ಕಂಬಳದ ಅಪಸ್ವರಕ್ಕೆ ಕಾರಣರಾದ ಚಂದ್ರಹಾಸ ಶೆಟ್ಟಿಯವರಿಗೆ ಬುದ್ದಿ ಕಲಿಸಿದರೇ ಪುತ್ತೂರು ಮಹಾಲಿಂಗೇಶ್ವರ ದೇವರು..?

- Advertisement -
- Advertisement -

ಪುತ್ತೂರು: ಕಂಬಳದಲ್ಲಿ ಮಾಡಿದ ತಪ್ಪಿಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಚಂದ್ರಹಾಸ ಶೆಟ್ಟಿ ಅವರಿಗೆ ಮಹಾಲಿಂಗೇಶ್ವರ ದೇವರು ತಕ್ಕ ಬುದ್ಧಿಯನ್ನು ಕಲಿಸಿದರೆ ಅನ್ನೋ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಲಯ ಕಾರ್ಯಕರ್ತರ ಸಭೆಯನ್ನು ಕೊಡಿಪ್ಪಾಡಿಯಲ್ಲಿ ಆಯೋಜಿಸಲಾಗಿತ್ತು

ಈ ಸಂದರ್ಭದಲ್ಲಿ ವೇದಿಕೆ ಜಮಾಯಿಸಿದ ಕಾವು ಹೇಮನಾಥ ಶೆಟ್ಟಿ ಅವರ ಅಭಿಮಾನಿಗಳ ತಂಡ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ಆಪ್ತ ಚಂದ್ರಹಾಸ ಶೆಟ್ಟಿ ಅವರ ಕಾಲರ್ ಹಿಡಿದು ದಬಾಯಿಸಿ ಚಳಿ ಬಿಡಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿತ್ತು.ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಪುತ್ತೂರಿನಲ್ಲಿ ನಡೆದ ಕೋಟಿ ಚೆನ್ನಯ ಜೋಡು ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಸಾನಿಯಾ ಅಯ್ಯರ್ ಜೊತೆ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ್ದ. ಈ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದಕ್ಕಾಗಿ ಪುತ್ತೂರು ಜೋಡುಕರೆ ಕಂಬಳ ಸಮಿತಿ ಪುತ್ತೂರು ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದರು.

ಕಂಬಳಗದ್ದೆಯಲ್ಲಿ ಗಲಭೆ ಮಾಡಿದವರಿಗೆ ಕ್ಷೇಮವಿಲ್ಲ. ಅಪಸ್ವರ ಮಾಡಿದವರಿಗೆ ದೇವರೇ ಸರಿಯಾದ ಶಿಕ್ಷೆ ಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಗಿತ್ತು. ಇನ್ನು ಈ ವೇಳೆ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಕೂಡ ಇದ್ದರು. ರಾಜಕೀಯ ಕ್ಷೇತ್ರದಲ್ಲೇ ಗುರುತಿಸಿಕೊಂಡ ಚಂದ್ರಹಾಸ ಶೆಟ್ಟಿ ಅವರಿಗೆ ಸ್ವಪಕ್ಷದ ಕಾರ್ಯಕರ್ತರೇ ತರಾಟೆಗೆ ತೆಗೆದುಕೊಂಡು ಮಹಾಲಿಂಗೇಶ್ವರ ದೇವರೇ ಬುದ್ದಿ ಕಲಿಸಿದ್ರಾ.? ಅಪಸ್ವರಕ್ಕೆ ಇವರೇ ಕಾರಣಕರ್ತರಾ ಅನ್ನುವ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

- Advertisement -

Related news

error: Content is protected !!