- Advertisement -
- Advertisement -


ಪ್ರಾದೇಶಿಕ ಅಸಮತೋಲನ ಖಂಡಿಸಿ ಕಾಂಗ್ರೆಸ್ ನಿಂದ ಕಲ್ಯಾಣ ಕರ್ನಾಟಕ ಯಾತ್ರೆ ನಡೆಸಲಾಗುವುದು. ಇದಕ್ಕಾಗಿ ಈಗಾಗಲೆ ರೂಪರೇಷೆ ಸಿದ್ಧಗೊಳಿಸುತ್ತಿದ್ದು, ಬರುವ ಎಪ್ರಿಲ್ನಲ್ಲಿ ಯಾತ್ರೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕೋಮ ಸೌಹಾರ್ದವನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಯಾತ್ರೆ ಮಹತ್ವ ಪಡೆದಿದೆ. ಈಗಾಗಲೇ ಈ ಬಗ್ಗೆ ಎರಡು ಬಾರಿ ಸಭೆ ಕರೆದು ಚರ್ಚೆ ಮಾಡಲಾಗಿದೆ ಎಂದರು.

ಬಿಜೆಪಿ ಸರ್ಕಾರದಿಂದ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ ಆಗಿದೆ. ಬಜೆಟ್ ನಲ್ಲಿ ಈ ಹಿಂದೆ ಮೀಸಲಿಟ್ಟ ಹಣವನ್ನೇ ಖರ್ಚು ಮಾಡಿಲ್ಲ. ಈ ಬಜೆಟ್ ನಲ್ಲಿ ಮತ್ತೆ ಮೂರು ಸಾವಿರ ಕೋಟಿ ನೀಡಿದ್ದಾರೆ ಎಂದವರು ಆಪಾದಿಸಿದರು.


- Advertisement -