- Advertisement -
- Advertisement -


ಬಂಟ್ವಾಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರೊಬ್ಬರ ಸರವನ್ನು ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಎಳೆದು ಪರಾರಿಯಾದ ಘಟನೆ ಕಾವಳಪಡೂರು ಗ್ರಾಮದ ಹಂಚಿಕಟ್ಟೆ ಎಂಬಲ್ಲಿ ನಡೆದಿದೆ.
ಅತ್ತೆ-ಸೊಸೆ ಕಾರ್ಯಕ್ರಮಕ್ಕೆಂದು ಹಂಚಿಕಟ್ಟೆ ಕಡೆಯಿಂದ ಸಾಲು ಮರದ ತಿಮ್ಮಕ್ಕ ಉದ್ಯಾನವನ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ವ್ಯಕ್ತಿ ಬೈಕ್ ನಿಲ್ಲಿಸಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಚಿನ್ನದ ಒಪ್ಪದ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದಾನೆ. ಎಳೆಯ್ಯುವ ರಭಸಕ್ಕೆ ಮಹಿಳೆ ರಸ್ತೆಗೆ ಬಿದ್ದು ಸಣ್ಣ- ಪುಟ್ಟ ಗಾಯಗೊಂಡಿದ್ದಾರೆ.
ಈ ಪ್ರಕರಣ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


- Advertisement -