Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಮೋದಿ ಕಾರ್ಯಕ್ರಮದ ಸ್ಥಳದಲ್ಲಿ ಬಾಂಬ್‌ ಇಟ್ಟ ಪ್ರಕರಣ; ಕೈಜೋಡಿಸಿದ ನಂದಾವರ ಮೂಲದ ನಾಲ್ವರ ಮನೆಗೆ ಎನ್.ಐ.ಎ ದಾಳಿ

- Advertisement -
- Advertisement -

ಬಂಟ್ವಾಳ: ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಎನ್‌ಐಎ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಾಟ್ನಾದ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮ‌ೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿ ತನಿಖೆ ನಡೆಸುತ್ತಿದೆ.

ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ದಾಳಿ ನಡೆದಿದ್ದು, ಈ ಅರೋಪಿಗಳು ಪಾಟ್ನಾ ದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ಜೊತೆ ಸಂಪರ್ಕ ಹೊಂದಿ ಹಣಕಾಸಿನ ನೆರವು ಒದಗಿಸಿದ್ದಾರೆ ಎಂಬ ಆರೋಪದಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಈ ಕೃತ್ಯಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ವಿವಿಧ ಖಾತೆಗಳಿಗೆ ಕೋಟ್ಯಾಂತರ ರೂಪಾಯಿ ಹಣದ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಇವರ ಮೇಲಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎನ್.ಐ.ಎ ತಂಡ ವೇಳೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿದೆ.

- Advertisement -

Related news

error: Content is protected !!