Sunday, June 29, 2025
spot_imgspot_img
spot_imgspot_img

ಬಂಟ್ವಾಳ: ರಮಾನಾಥ ರೈಯವರ ದಕ್ಷತೆಯ ನಾಯಕತ್ವವನ್ನು ಮೆಚ್ಚಿ ಕಾಂಗ್ರೇಸ್‌ ಸೇರ್ಪಡೆ

- Advertisement -
- Advertisement -

ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈಯವರ ದಕ್ಷತೆಯ ನಾಯಕತ್ವವನ್ನು ಮೆಚ್ಚಿ ಸಮಾಜ ಸೇವಕರು, ಸಾಮಾಜಿಕ ಚಿಂತಕರುಗಳಾದ ಗುಬ್ಯಮೇಗಿನ ಗುತ್ತಿನ ಶ್ರೀಧರ ಕೆ. ಶೆಟ್ಟಿ ಮತ್ತು ಪಟ್ಲಗುತ್ತಿನ ದಾಮೋದರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆಯಾದರು. ರಮಾನಾಥ ರೈ ಅವರ ಸಮ್ಮುಖದಲ್ಲಿ ಬುಧವಾರ ಬಿ.ಸಿ.ರೋಡ್ ನಲ್ಲಿರುವ ಪಕ್ಷದ ಚುನಾವಣಾ ಕಚೇರಿಯಲ್ಲಿ ಶ್ರೀಧರ ಶೆಟ್ಟಿ ಮತ್ತು ದಾಮೋದರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆಗೊಂಡರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ರಮಾನಾಥ ರೈಯವರನ್ನು ಮತ್ತೊಮ್ಮೆ ಗೆಲ್ಲಿಸಬೇಕು ಎಂಬ ಉದ್ದೇಶವಿದೆ. ಕ್ಷೇತ್ರದ ಜನತೆಯ ಮನವೊಲಿಸಿ ರೈಯವರ ವಿಜಯ ಪತಾಕೆ ಮತ್ತೊಮ್ಮೆ ಹಾರುವಂತೆ ಮಾಡಬೇಕು ಎಂದು ಶ್ರೀಧರ ಶೆಟ್ಟಿ ಹೇಳಿದರು. ರೈಗಳು ಅಧಿಕಾರದಲ್ಲಿದ್ದಾಗ ಸಾಕಷ್ಟು ಪ್ರಗತಿ ಕಾರ್ಯಗಳನ್ನು ಮಾಡಿದ್ದಾರೆ. ಕ್ಷೇತ್ರಕ್ಕಾಗಿ ಅವರ ಕೊಡುಗೆಗಳನ್ನು ಸ್ಮರಿಸಿಕೊಂಡು ಜನತೆ ಮತದಾನ ಮಾಡಬೇಕು. ಅವರಂತಹ ದೂರದೃಷ್ಟಿಯುಳ್ಳ ನಾಯಕರು ನಮಗೆ ನಾಯಕರಾದರೆ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ದಾಮೋದರ ಶೆಟ್ಟಿ ತಿಳಿಸಿದರು.

- Advertisement -

Related news

error: Content is protected !!