Sunday, June 29, 2025
spot_imgspot_img
spot_imgspot_img

ಬಸವರಾಜ ಹೊರಟ್ಟಿಯವರ ಕಾರು ಅಪಘಾತ; ಬೈಕ್ ಸವಾರನಿಗೆ ಗಾಯ

- Advertisement -
- Advertisement -

ಹುಬ್ಬಳ್ಳಿ: ಇಲ್ಲಿನ ಬಿ.ವಿ.ಬಿ ಕಾಲೇಜಿನಲ್ಲಿ ಭಾನುವಾರ ನಡೆದ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರ ಕಾರು ಅಪಘಾತಕ್ಕೀಡಾಗಿದೆ.

ಹೊರಟ್ಟಿಯವರ ಕಾರು ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್‌ ಸವಾರ ಕೆಂಚಪ್ಪ ಗೂಡಣ್ಣನವರ ಅವರಿಗೆ ಗಾಯವಾಗಿದೆ.

ಘಟನೆ ನಡೆದ 10 ನಿಮಿಷ ಸ್ಥಳದಲ್ಲಿದ್ದ ಹೊರಟ್ಟಿ, ನಂತರ ಅಲ್ಲಿಂದ ಮತ್ತೊಂದು ವಾಹನದಲ್ಲಿ ತೆರಳಿದ್ದಾರೆ.‌‌‌‌‌‌‌‌‌‌‌‌‌‌‌‌‌‌‌‌

vtv vitla
- Advertisement -

Related news

error: Content is protected !!