Saturday, June 28, 2025
spot_imgspot_img
spot_imgspot_img

ಬಿಸಿ ಎಣ್ಣೆ ಬಾಣಲೆಗೆ ಹಾರಿ ಬೇಕರಿ ಕಾರ್ಮಿಕ ಆತ್ಮಹತ್ಯೆಗೆ ಶರಣು:!!

- Advertisement -
- Advertisement -

ಮಂಗಳೂರು: ಅಡ್ಡೂರಿನ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಖಾದ್ಯ ತಿಂಡಿ ತಯಾರಿಸುವ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಪೊಳಲಿ ನಿವಾಸಿ ಪುರಂದರ(50) ಎಂದು ಗುರುತಿಸಲಾಗಿದೆ.

ಪುರಂದರ ಬೇಕರಿಯಲ್ಲಿ ಕೆಲವು ವರ್ಷದಿಂದ ಕೆಲಸ ಮಾಡುತ್ತಿದ್ದರು. ಕಳೆದ ಎರಡು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಮಧ್ಯಾಹ್ನ ಕಾರ್ಮಿಕರು ಬೇಕರಿಯಿಂದ ಹೊರಗಡೆ ಇದ್ದಾಗ ಬಾಗಿಲು ಹಾಕಿ ಉರಿಯುತ್ತಿದ್ದ ಎಣ್ಣೆ ಬಾಣಲೆಗೆ ಹಾರಿದ್ದಾರೆ.

ಮೈಯೆಲ್ಲ ಸುಟ್ಟ ಗಾಯಗಳೊಂದಿಗೆ ಬೊಬ್ಬಿಡುತ್ತಿದ್ದ ಪುರಂದರ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕ್ಸಿತೆ ಫಲಕಾರಿಯಾಗದೆ ಕೊನೆಯುಸಿರೆಳದಿದ್ದಾರೆ ಎಂದು ಪ್ರಕರಣ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

- Advertisement -

Related news

error: Content is protected !!