Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ನೀರಲ್ಲಿ ಮುಳುಗಿದ್ದ ಕಬಕದ ಯುವಕನ ಶವ ಪತ್ತೆ.!

- Advertisement -
- Advertisement -

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ನಿನ್ನೆ(ಭಾನುವಾರ) ಸಂಜೆ ನೇತ್ರಾವತಿ ನದಿಗೆ ತನ್ನ ಸಹೋದರ ಸಂಬ0ಧಿಯೊ0ದಿಗೆ ಸ್ನಾನ ಮಾಡಲು ತೆರಳಿದ್ದ ಕಬಕದ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಸಾವನ್ನಪ್ಪಿದ ಯುವಕನನ್ನು ಪುತ್ತೂರು ಕಬಕ ನಿವಾಸಿ ಕಿರಣ್(20) ಎನ್ನಲಗಿದ್ದು, ಈತನು ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದ ಸಂದರ್ಭ ಈ ಘಟನೆ ನಡೆದಿದೆ.

ಭಾನುವಾರ ಸಂಜೆಯಿ0ದ ಸ್ಥಳೀಯರು ಹಾಗೂ ಅಗ್ನಿ ಶಾಮಕ ದಳ ತಡರಾತ್ರಿ ವರೆಗೂ ಕಾರ್ಯಾಚರಣೆ ನಡೆಸಿದರೂ ಯುವಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಡಿದಾಗ ಮೃತ ದೇಹ ಪತ್ತೆಯಾಗಿದೆ. ಈ ಬಗ್ಗೆ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!