
ಬೆಳ್ತಂಗಡಿ: ನಿಯಂತ್ರಣ ಕಳೆದುಕೊಂಡ ಬೈಕ್ ಮನೆಯ ಗೇಟಿನ ಬಳಿ ಇದ್ದ ಕಲ್ಲಿನ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಘಟನೆ ಉಜಿರೆಯ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಪಕ್ಕದ ತಿರುವಿನ ರಸ್ತೆಯಲ್ಲಿ ನಡೆದಿದೆ. ಬೈಕ್ ಸ್ಕಿಡ್ ಆಗಿ ಸವಾರ ಮೃತಪಟ್ಟಿರುವ ಘಟನೆ ನ.23 ರಂದು ರಾತ್ರಿ ವೇಳೆ ನಡೆದಿದೆ. ನೆರಿಯ ಗ್ರಾಮದ ಪಾದೆಗುಡ್ಡೆ ನಿವಾಸಿ ನೋಣಯ್ಯ ಗೌಡರ ಪುತ್ರ ಪ್ರದೀಪ್ (22) ದುರ್ದೈವಿ.
ಪ್ರದೀಪ್ ಸಂಬಂಧಿಗಳ ಮನೆಯಲ್ಲಿ ಇರುವ ಶುಭ ಕಾರ್ಯದ ನಿಮಿತ್ತ ವಸ್ತುವೊಂದನ್ನು ನೀಡಲು ಹೋಗುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತವಾದ ರಸ್ತೆಯು ಅಪಾಯಕಾರಿ ವಲಯವಾಗಿದ್ದು , ಈ ಹಿಂದೆ ಕೂಡ ಇಲ್ಲಿ ಹಲವಾರು ಭಾರಿ ಅಪಘಾತ ಮತ್ತು ಪ್ರಾಣಹಾನಿ ಸಂಭವಿಸಿದೆ.

ಪ್ರದೀಪ್ ಅವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಎಡ ಭಾಗದಲ್ಲಿರುವ ಮನೆಯ ಗೇಟಿನ ಬಳಿ ಇದ್ದ ಕಲ್ಲಿನ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಲ್ಲಿದ್ದ ಸ್ಥಳೀಯರು ತಕ್ಷಣ ಪ್ರದೀಪ್ ಅವರನ್ನು ಉಜಿರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಮಂಗಳೂರಿಗೆ ಸಾಗಿಸುವ ಮಧ್ಯ ದಾರಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
- ಜಂತರ್ ಮಂತರ್ ಪ್ರತಿಭಟನೆ ವಿಚಾರ: ‘ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಬೇಕಿತ್ತು’ ಎಂದು ವೀಡಿಯೋ ಪೋಸ್ಟ್ -ಮೋಹನ್ ದಾಸ್ ಪೊಲೀಸ್ ವಶಕ್ಕೆ
- ಟೆರೇಸ್ಗೆ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರ-ಕೆಲಸಕ್ಕೆ ಸೇರಿದ ನಾಲ್ಕೇ ದಿನಕ್ಕೆ ಕೃತ್ಯ- ಸೆಕ್ಯುರಿಟಿ ಗಾರ್ಡ್ ಅರೆಸ್ಟ್
- ಸಂಪಾಜೆ ಚಡಾವು ಬಳಿ ಅಪಘಾತ: ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ
- ಬೆಳ್ತಂಗಡಿ: ನಶೆಯಲ್ಲಿದ್ದ ವ್ಯಕ್ತಿಗೆ ವೈದ್ಯಕೀಯ ಪರೀಕ್ಷೆ- ಪೊಲೀಸರ ವಿಚಾರಣೆಯಲ್ಲಿ ಮಾದಕ ವಸ್ತು ಸೇವನೆ ಒಪ್ಪಿಕೊಂಡ ವ್ಯಕ್ತಿ
- ಕಾಸರಗೋಡು:ವಿವಾದಾತ್ಮಕ ರಸಪ್ರಶ್ನೆ ತಯಾರಿಸಿದ ಆರೋಪ: ಶಿಕ್ಷಕ ಅಮಾನತು










