Monday, June 30, 2025
spot_imgspot_img
spot_imgspot_img

ಮಂಗಳೂರು: ಅನ್ಯಧರ್ಮದ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ; ಮತಾಂತರ ಸಹಿಸೋದಿಲ್ಲ: ವಜ್ರದೇಹಿ ಶ್ರೀ

- Advertisement -
- Advertisement -
vtv vitla
vtv vitla

ಮಂಗಳೂರು: ಮುಸ್ಲಿಂ ಹುಡುಗನನ್ನು ಹಿಂದೂ ಯುವತಿಯೊಬ್ಬಳು ಮದುವೆಯಾಗಲು ಮುಂಡಾಗಿದ್ದು, ಅವಳ ಮನೆಗೆ ತೆರಳಿ ಆಕೆಯನ್ನು ಎಚ್ಚರಿಸಿದ್ದೆವು. ಇದೀಗ ಮತ್ತೊಂದು ಘಟನೆಯಾಗಿದ್ದು ಬಸ್ ನಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯೊಬ್ಬಳು ತೆರಳಿದ್ದಾಳೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅಸಮಾಧಾನ ಹೊರ ಹಾಕಿದ್ದಾರೆ.

vtv vitla
vtv vitla

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ನಾವೇ ಬೆಂಕಿಗೆ ಬೀಳುತ್ತೇವೆ ಎನ್ನುವವರಿಗೆ ಏನು ಮಾಡಲು ಸಾಧ್ಯವಿಲ್ಲ. ಆದರೆ, ಯಾವುದೇ ಕಾರಣಕ್ಕೂ ಮತಾಂತರ ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಮುಸ್ಲಿಂ ಹುಡುಗನ ಜತೆ ಹಿಂದೂ ಹುಡುಗಿ ಬಸ್‌ನಲ್ಲಿ ತೆರಳಿದ ವಿಚಾರವನ್ನು ಕೂಲಂಕುಷ ತನಿಖೆಗೆ ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದೇವೆ ಎಂದು ಮಂಗಳೂರಿನಲ್ಲಿ ವಜ್ರದೇಹಿ ಸ್ವಾಮೀಜಿ ಆಗ್ರಹಿಸಿದ್ದಾರೆ.

ಮತಾಂತರ ತಡೆ ಕಾನೂನು ಹಲ್ಲಿಲ್ಲದ ಹಾವು:

ಮತಾಂತರ ತಡೆ ಕಾನೂನಿನಲ್ಲಿ ಬದಲಾವಣೆ ಆಗಬೇಕು. ಈ ಕುರಿತು ಸರ್ಕಾರವನ್ನು ಒತ್ತಾಯಿಸಿದ್ದೇವೆ. ಬಾಗಲಕೋಟೆಯ ಕುಟುಂಬ ಮತಾಂತರಕ್ಕೆ ಬಲಿಯಾಗಿದೆ. ಪ್ರಕರಣದಲ್ಲಿ 2 ಮಕ್ಕಳು ಕೂಡಾ ಬಲಿಯಾಗಿದ್ದಾರೆ. ಹೀಗಾಗಿ ಮತಾಂತರ ನಿಷೇಧ ಕಾನೂನು ಜಾರಿಗೆ ಬರಬೇಕು ಎಂದು ಮಂಗಳೂರಿನಲ್ಲಿ ವಜ್ರದೇಹಿ ಸ್ವಾಮೀಜಿ ಆಗ್ರಹಿಸಿದ್ದಾರೆ.

vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!