- Advertisement -
- Advertisement -

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ ಪೊಲೀಸ್ ಇಲಾಖೆ ಜಾರಿಗೆ ತರಲಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿರಿಗೆ ಅವಕಾಶವಿಲ್ಲ ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ.

ಹದಿನೆಂಟು ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಈ ನಿಯಮದಿಂದ ರಿಯಾಯಿತಿ ನೀಡಲಾಗಿದೆ. ಕೇವಲ ಪುರುಷ ಹಿಂಬದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯಿಸಲಿದೆ. ಮುಂದಿನ ಒಂದು ವಾರದ ಮಟ್ಟಿಗೆ ಜಿಲ್ಲೆಯಲ್ಲಿ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ಕೆಲವು ಬಾರಿ ಹಿಂಬದಿ ಸವಾರರು ಸಮಸ್ಯೆ ಉಂಟು ಮಾಡ್ತಾರೆ. ಬೇರೆ ರಾಜ್ಯದಲ್ಲೂ ಈ ನಿಯಮ ಜಾರಿಗೆ ತರಲಾಗಿತ್ತು. ಆಗ ಎಲ್ಲಾ ಪುರಷ ಹಿಂಬದಿ ಸವಾರರಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸಲು ಅವಕಾಶ ನಿರಾಕರಿಸಲಾಗಿತ್ತು ಇಲ್ಲಿ ಮಹಿಳೆಯರು, ಹಿರಿಯ ನಾಗರಿಕರು,ಮಕ್ಕಳಿಗೆ ರಿಯಾಯಿತಿ ನೀಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

- OLX app ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡುತ್ತಿದ್ದ ಆರೋಪಿತನ ಬಂಧನ
- ಶ್ರೀರಾಮಸೇನೆಯ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ; ಗೋರಕ್ಷಣೆೆಗೆ ಹೋದವರ ಮೇಲೆ ಮನಬಂದಂತೆ ಥಳಿತ!
- ಮಂಗಳೂರು: ಯು.ಕೆ.ಯಲ್ಲಿ ಉದ್ಯೋಗ – ವೀಸಾ ಕೊಡಿಸುವುದಾಗಿ ನಂಬಿಸಿ ವಂಚನೆ..!
- ಪುತ್ತೂರು: ಲಾರಿ-ಜೀಪ್ ನಡುವೆ ಡಿಕ್ಕಿ; ಜೀಪ್ ಚಾಲಕನಿಗೆ ಗಾಯ; ಆಸ್ಪತ್ರೆಗೆ ದಾಖಲು..!
- 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

- Advertisement -