Sunday, June 29, 2025
spot_imgspot_img
spot_imgspot_img

ಮಂಗಳೂರು: ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಮುಸ್ಲಿಂ ಯುವಕರ ಮೇಲೆ ಹಲ್ಲೆಗೈದ ಆರೋಪ; ಬಜರಂಗದಳದ ನಾಲ್ವರು ಕಾರ್ಯಕರ್ತರು ಅರೆಸ್ಟ್‌

- Advertisement -
- Advertisement -

ಕಡಲನಗರಿ ಮಂಗಳೂರಿನಲ್ಲಿ ಬಜರಂಗದಳ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಡಿ ನಾಲ್ವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿಬಿನ್, ಗಣೇಶ್, ಪ್ರಕಾಶ್, ಚೇತನ್ ಎನ್ನಲಾಗಿದೆ.

ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಕೆಲಸಕ್ಕಿದ್ದ ಹಿಂದೂ ಯುವತಿಯ ಸ್ನೇಹ ಗಿಟ್ಟಿಸಿಕೊಂಡಿದ್ದಾಗಿ ಲುಕ್ಮಾನ್ ಮೇಲೆ ಆರೋಪ ಹೊರೆಸಿ ಹಲ್ಲೆ ನಡೆಸಿದ್ದಾಗಿ ದೂರು ದಾಖಲಾಗಿತ್ತು.

ಸುಲ್ತಾನ್ ಜ್ಯುವೆಲ್ಲರಿಗೆ ಬಂದ ಯುವತಿಯ ಮನೆಯವರು ಹಾಗೂ ಪ್ರಿಯಕರ ಯುವಕನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದರ ನಡುವೆ ಏಕಾಏಕಿ ಬಜರಂಗದಳ ಕಾರ್ಯಕರ್ತರು ಯುವಕನ ಮೇಲೆ ಅಟ್ಯಾಕ್ ಮಾಡಿದ್ದಾರೆ ಎಂಬ ಆರೋಪದಡಿ ನಾಲ್ವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

ಮೂರು ದೂರು ದಾಖಲು
ಇನ್ನು ಈ ಬಗ್ಗೆ ಯುವತಿಯ ಮನೆಯವರು, ಸೇಲ್ಸ್‌ ಎಕ್ಸಿಕ್ಯೂಟಿವ್ ಲುಕ್ಮಾನ್, ಸೇಲ್ಸ್‌ ಆಫೀಸರ್ ಫೈಝಲ್ ದೂರು ನೀಡಿದ್ದರು. ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಡಿ ಶಿಬಿನ್, ಗಣೇಶ್, ಪ್ರಕಾಶ್, ಚೇತನ್ ಎಂಬವರನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!