Monday, June 30, 2025
spot_imgspot_img
spot_imgspot_img

ಮಂಗಳೂರು: ಸ್ಕೂಟರಿನಲ್ಲಿ ಬಂದ ದುಷ್ಕರ್ಮಿಯಿಂದ ವಿದ್ಯಾರ್ಥಿನಿಗೆ ಕಿರುಕುಳ- ಅಕ್ರಮ ವಲಸಿಗನ ಮೇಲೆ ಶಂಕೆ.!?

- Advertisement -
- Advertisement -
vtv vitla

ಮಂಗಳೂರು: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಸ್ಕೂಟರಿನಲ್ಲಿ ಬಂದ ಕಿರಾತಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಲಪಾಡಿ ಅಲಂಕಾರುಗುಡ್ಡೆ ಬಳಿ ನಡೆದಿದೆ.

ಕೋಟೆಕಾರು ಬಳಿಯ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ತಲಪಾಡಿ ಚೆಕ್ ಪೋಸ್ಟ್ ಬಳಿ ಬಸ್ಸು ಹತ್ತಲು ಒಳದಾರಿಯಾಗಿ ನಡೆಕೊಂಡು ಬರುವಾಗ ಘಟನೆ ನಡೆದಿದೆ. ವಿದ್ಯಾರ್ಥಿನಿ ಗಾಬರಿಗೊಂಡು ಬೊಬ್ಬಿಟ್ಟಾಗ ಸ್ಥಳೀಯರು ಜಮಾಯಿಸುವಷ್ಟರಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಸ್ಥಳೀಯರು ವಿದ್ಯಾರ್ಥಿನಿ ಗೆ ಧೈರ್ಯ ತುಂಬಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಕುರಿತಂತೆ ಸಿಸಿಟಿವಿಯಲ್ಲಿ ದಾಖಲೆಯಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ತೆರಳಿ ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಸ್ಥಳೀಯವಾಗಿ ಹಲವು ಕಾರ್ಖಾನೆಗಳಿಗೆ ವಲಸೆ ಕಾರ್ಮಿಕರು ಬಂದಿದ್ದು, ಅವರ ದಾಖಲೆಗಳನ್ನು ಪೊಲೀಸ್ ಠಾಣೆಯಲ್ಲಿ ಮಾಲೀಕರು ದಾಖಲಿಸಿರುವುದಿಲ್ಲ. ಅಲ್ಲದೆ ಈ ಭಾಗದಲ್ಲಿ ಇಂತಹ ಕೃತ್ಯಗಳು ಅನೇಕ ನಡೆಯುತ್ತಿದ್ದು, ಈ ಬಗ್ಗೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಗಮನಕ್ಕೆ ತಂದಿದ್ದರೂ, ಕ್ರಮ ವಹಿಸಿಲ್ಲ ಅನ್ನುವ ಆರೋಪ ಕೇಳಿಬಂದಿದೆ.

- Advertisement -

Related news

error: Content is protected !!