- Advertisement -
- Advertisement -


ರಾಮ ನವಮಿಯ ಮೆರವಣಿಗೆ ವೇಳೆ ಜಾಮೀಯಾ ಮಸೀದಿ ರಸ್ತೆಯಲ್ಲಿ ಎರಡು ಕೋಮಿನ ಯುವಕರ ನಡುವೆ ಗಲಾಟೆ ತಾರಕಕ್ಕೇರಿದ ಪರಿಣಾಮ ಇಬ್ಬರು ಯುವಕರಿಗೆ ಚಾಕು ಇರಿದ ಘಟನೆ ನಡೆದಿದ್ದು, ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹರ್ಷ ಹಾಗೂ ಅವನ ಸ್ನೇಹತ ಗಾಯಗೊಂಡ ಯುವಕರು. ದುಷ್ಕರ್ಮಿಗಳು ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚನ್ನರಾಯಪಟ್ಟಣದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಜಿಲ್ಲೆಯ ವಿವಿಧ ಭಾಗಗಳಿಂದ ಪೊಲೀಸರ ನಿಯೋಜನೆ ಮಾಡಲಾಗಿದೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
- Advertisement -