Saturday, June 28, 2025
spot_imgspot_img
spot_imgspot_img

ವಿಟ್ಲ: ಎಸ್‌ಡಿಪಿಐ ಮುಖಂಡ ತಂಸೀರ್‌ ಮನೆಗೆ ಪೊಲೀಸ್ ದಾಳಿ…!

- Advertisement -
- Advertisement -
astr

ದೇಶದ ವಿವಿಧ ಕಡೆಗಳಲ್ಲಿ ಇಂದು ಎನ್‌ಐಎ ದಾಳಿ ನಡೆಸಿದೆ. ಮಂಗಳೂರಿನಲ್ಲೂ ಎಸ್‌ಡಿಪಿಐಗೆ ಇಂದು ಎನ್‌ಐಎ ಶಾಕ್‌ ಕೊಟ್ಟಿದೆ. ಈ ನಡುವೆ ವಿಟ್ಲದಲ್ಲಿ ನಡೆದ ಪೊಲೀಸ್‌ ರೈಡ್‌ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಎಸ್‌ಡಿಪಿಐ ಮುಖಂಡನ ಮನೆ ಮೇಲೆ ಖಾಕಿ ಪಡೆ ದಾಳಿ ನಡೆಸಿದೆ.

ಬಂಟ್ವಾಳ: ರಾಜ್ಯದಲ್ಲಿನ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೊಲೀಸರ ತಂಡ ಮುಂಜಾನೆ ವೇಳೆ ಬೊಳಂತೂರು ವ್ಯಕ್ತಿಯೋರ್ವನ ಮನೆಗೆ ದಾಳಿ ನಡೆಸಿ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕುತ್ತಿದೆ.

ವಿಟ್ಲ ಠಾಣಾ ವ್ಯಾಪ್ತಿಯ ನಾರ್ಶ ಸಮೀಪದ ಬೋಳಂತೂರು ಗ್ರಾಮದ ಬೀರುಕೋಡಿ ನಿವಾಸಿ ಮಹಮ್ಮದ್ ಕುಟ್ಟಿ ಎಂಬವರ ಪುತ್ರ ಮಹಮ್ಮದ್ ತಂಸೀರ್ ಎಂಬವರ ಮನಗೆ ಮುಂಜಾನೆ ಮೂರು ಗಂಟೆ ವೇಳೆ ಪೊಲೀಸ್ ದಾಳಿ ನಡೆಸಿದೆ. ಯಾವ ಪ್ರಕರಣಕ್ಕೆ ಎಂಬ ವಿಚಾರವನ್ನು ಇಲ್ಲಿನ ಪೊಲೀಸರು ಮಾಹಿತಿ ನೀಡುತ್ತಿಲ್ಲ.

ವಿಚಾರಣೆಯ ದೃಷ್ಟಿಯಿಂದ ಗೌಪ್ಯತೆ ಕಾಪಾಡಲು ರಾಜ್ಯ ಪೋಲೀಸರ ನಿರ್ದೇಶನದಂತೆ ಅವರು ಮಾಹಿತಿ ನೀಡುತ್ತಿಲ್ಲ ಎಂಬ ವಿಚಾರ ಲಭ್ಯವಾಗಿದೆ.

ರಾಜ್ಯದ ಪ್ರಕರಣವೊಂದಕ್ಕೆ ಹಲವು ವಿಚಾರಗಳನ್ನು ಕುರಿತು ಈ ದಾಳಿ ನಡೆದಿದ್ದು, ತಂಸೀರ್‌ ಅವರಿಗೆ ಸೇರಿದ ಎರಡು ಮನೆಗಳಿಗೆ ಅಂದರೆ ಒಂದು ಹಳೆಯ ಮನೆ ಹಾಗೂ ಹೊಸ ಮನೆಗಳಿಗೆ ದಾಳಿ ನಡೆಸಿ ಎಲ್ಲಾ ಮಾಹಿತಿ ಕಲೆ ಹಾಕಲಾಗಿತ್ತಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ,ವಿಟ್ಲ ಇನ್ಸ್ ಪೆಕ್ಟರ್ ನಾಗರಾಜ್ ಎಚ್, ನಗರ ಠಾಣಾ ಪೊಲೀಸ್ ಎಸ್. ಐ.ಅವಿನಾಶ್, ಗ್ರಾಮಾಂತರ ಎಸ್ ಐ ಹರೀಶ್, ವಿಟ್ಲ ಎಸ್.ಐ.ಸಂದೀಪ್ ಸಹಿತ ಇಡೀ ಪೊಲೀಸ್ ತಂಡ ಇಲ್ಲಿ ಮೊಕ್ಕಾಂ ಇದ್ದು ಭದ್ರತೆ ಒದಗಿಸಿ ತನಿಖೆ ನಡೆಸುತ್ತಿದೆ. ಹೆಚ್ಚಿನ ಮಾಹಿತಿ ಪೋಲಿಸರು ನೀಡಿದ ಬಳಿಕ ತಿಳಿಯಬೇಕು.

- Advertisement -

Related news

error: Content is protected !!