Saturday, June 28, 2025
spot_imgspot_img
spot_imgspot_img

ವಿಟ್ಲ ಠಾಣಾ ವ್ಯಾಪ್ತಿಯ ಹಲವು ಕಡೆಗಳಿಂದ ದನ ಕಳ್ಳತನ ಮಾಡುತ್ತಿದ್ದ ಅಂತರಾಜ್ಯದ ನಟೋರಿಯಸ್ ಗ್ಯಾಂಗ್‌ನ ಹೆಡೆಮುರಿ ಕಟ್ಟಿದ ಬಜಪೆ ಪೊಲೀಸರು

- Advertisement -
- Advertisement -

ಮಂಗಳೂರು ಮತ್ತು ಚಿಕ್ಕಮಂಗಳೂರು ಭಾಗದಲ್ಲಿ ದನ ಕಳವು ಮಾಡುತ್ತಿದ್ದ ಅಂತರಾಜ್ಯದ ನಟೋರಿಯಸ್ ಗ್ಯಾಂಗ್ ಅನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ಗಂಜಿಮಠದ ನಿವಾಸಿ ಇರ್ಷಾದ್ ಮತ್ತು ಕೇರಳದ ಮಂಜೇಶ್ವರದ ನಿವಾಸಿ ಇರ್ಪಾನ್ ಬಂಧಿತರು. ಮದ್ದಡ್ಕ ಫಾರೂಕ್ ಎಂಬಾತನು ಪೊಲೀಸರಿಂದ ತಪ್ಪಿಸಿಕೊಂಡಿರುತ್ತಾನೆ. ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಕಾಶ್ ರವರ ಆದೇಶದಂತೆ ಮಾ.6 ರಂದು ಬೆಳಗಿನ ಜಾವ ಪಿಎಸೈ ಪೂವಪ್ಪ ರವರು ಸಿಬ್ಬಂದಿಗಳ ಜೊತೆ ಅಡ್ಡೂರು ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ ಮಂಗಳೂರು ನಗರ, ದ.ಕ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಕಾರುಗಳಲ್ಲಿ ಹೋಗಿ ದನಗಳನ್ನು ಕಳವು ಮಾಡುತ್ತಿದ್ದ ಆರೋಪಿಗಳನ್ನು ಮತ್ತು ದನ ಕಳವು ಮಾಡಲು ಉಪಯೋಗಿಸಿರುವ ಕೆಂಪು ಬಣ್ಣದ ಮಹೇಂದ್ರ ಕಂಪೆನಿಯ XYLO ಕಾರು ಹಾಗು ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.

ಆರೋಪಿತರನ್ನು ತೀವ್ರ ವಿಚಾರಣೆ ನಡೆಸಿದಾಗ ಇವರುಗಳು ಇತ್ತೀಚಿಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಮತ್ತು 2021 ನೇ ಇಸವಿಯಲ್ಲಿ ಬಡಗ ಎಡಪದವು ದಡ್ಡಿಯಿಂದ 2 ದನಗಳನ್ನು ಕೆಂಪು ಬಣ್ಣದ XYLO ಕಾರಿನಲ್ಲಿ ಕಳವು ಮಾಡಿರುವ ವಿಚಾರ ಒಪ್ಪಿಕೊಂಡಿರುತ್ತಾರೆ. ತಪ್ಪಿ ಕೊಂಡಿರುವ ಮಡ್ಡಡ್ಕ ಪಾರೂಕ್ ಎಂಬಾತನ ಪತ್ತೆಯ ಬಗ್ಗೆ ತೀವ್ರ ಕಾರ್ಯಚರಣೆ ನಡೆಸಲಾಗಿದೆ.

ಆರೋಪಿತರುಗಳ ವಿರುದ್ಧ ಮಂಗಳೂರು ನಗರದ ಬಜಪೆ, ಕೊಣಾಜೆ, ಕಾವೂರು, ಮೂಡುಬಿದ್ರೆ, ಮಂಗಳೂರು ಉತ್ತರ, ದ.ಕ ಜಿಲ್ಲೆಯ ಪುಂಜಲಕಟ್ಟೆ, ಬಂಟ್ವಾಳ ನಗರ ಮತ್ತು ಚಿಕ್ಕಮಂಗಳೂರು ಜಿಲ್ಲೆಯ ಬನಕಲ್, ಬಸವನಹಳ್ಳಿ ಮತ್ತು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಗಳಲ್ಲಿ ದನ ಕಳವು ಮತ್ತು ದರೋಡೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದು ಬಂದಿದೆ.

ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆಯ ಬಗ್ಗೆ, ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್ ಐಪಿಎಸ್ ರವರ ಮಾರ್ಗದರ್ಶನದಂತೆ ಡಿಸಿಪಿ ಅಂಶು ಕುಮಾರ್ ಮತ್ತು ದಿನೇಶ್ ಕುಮಾರ್ ರವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಮನೋಜ್ ಕುಮಾರ್‍ ನಾಯ್ಕ್ ರವರ ನೇತೃತ್ವದಲ್ಲಿ ಬಜಪೆ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಪ್ರಕಾಶ್‌ರವರ ನೇತೃತ್ವದಲ್ಲಿ ಪಿಎಸ್‌ವೈ ಪೂವಪ್ಪ, ಗುರು ಕಾಂತಿ, ಎ.ಎಸ್.ಐ ರಾಮಣ್ಣ ಪೂಜಾರಿ, ಸುಜನ್, ರಶೀದ ಶೇಖ, ರಾಜೇಶ್, ಸಂತೋಷ್ , ಸುಜನ್, ಸಂಜೀವ ಭಜಂತ್ರಿ, ಬಸವರಾಜ್ ಪಾಟೀಲ್ , ಮೋಹನ್, ಉಮೇಶ್ ಮತ್ತು ಕೆಂಚಪ್ಪರವರು ಪತ್ತೆ ಪಾಲ್ಗೊಂಡಿದ್ದರು.

ಮಿತ್ತೂರಿನಲ್ಲಿ ದನ ಕಳವುಗೈದಿದ್ದ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಹಿಂದೂ ಜಾಗರಣ ವೇದಿಕೆ ದನ ಕಳೆದುಕೊಂಡ ಮನೆಗೆ ತೆರಳಿ ಅವರಿಗೆ ಧೈರ್ಯ ತುಂಬಿದ್ದರು. ಶೀಘ್ರ ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದರು. ಆರೋಪಿಗಳನ್ನು ಶೀಘ್ರ ಪತ್ತೆ ಮಾಡದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿಯೂ ತಿಳಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌ ಉಳಿಪ್ಪಾಡಿಗುತ್ತು ರವರು ದನ ಕಳೆದುಕೊಂಡ ಮನೆಗೆ ಭೇಟಿ ನೀಡಿದ್ದು, ಅಧಿಕಾರಿಗಳಿಗೆ ಶೀಘ್ರ ಆರೋಪಿಗಳನ್ನು ಪತ್ತೆಹಚ್ಚುವಂತೆ ಸೂಚನೆ ನೀಡಿದರು.

- Advertisement -

Related news

error: Content is protected !!