Sunday, June 29, 2025
spot_imgspot_img
spot_imgspot_img

ವಿಟ್ಲ: ಮದುಮಗನಿಂದ ಕೊರಗಜ್ಜ ದೈವಕ್ಕೆ ಅವಮಾನ ಹಿನ್ನಲೆ; ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಕೊಳ್ನಾಡು ಮಹಾಶಕ್ತಿ ಕೇಂದ್ರದ ವತಿಯಿಂದ ಮನವಿ

- Advertisement -
- Advertisement -
suvarna gold
vtv vitla
vtv vitla

ವಿಟ್ಲ: ತುಳುನಾಡಿನ ಕಾರ್ನಿಕದ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ವರ ಆಗಮಿಸಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರಿನಲ್ಲಿ ನಡೆದಿದೆ.

ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡ ಬಂದ ವರನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ.

ಈ ಕೃತ್ಯವೆಸಗಿದವರ ಮತ್ತು ಆತನ ಸಂಗಡಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಟ್ಲ ಪೊಲೀಸ್ ಠಾಣೆಗೆ ಭಾರತೀಯ ಜನತಾ ಪಾರ್ಟಿ ಕೊಳ್ನಾಡು ಮಹಾಶಕ್ತಿ ಕೇಂದ್ರದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಬಂಟ್ವಾಳ ಮಂಡಲ ಕಾರ್ಯದರ್ಶಿ ರವಿ ಶೆಟ್ಟಿ ಕರ್ಕಳ, ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಕೊಳ್ನಾಡು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಲೋಹಿತ್ ಅಗರಿ, ಬಿಜೆಪಿ ಬಂಟ್ವಾಳ ಮಂಡಲದ ಸಾಮಾಜಿಕ ಸಾಮಾಜಿಕ ಜಾಲತಾಣದ ಪ್ರಮುಖ ಮನೋಜ್, ಪಕ್ಷದ ಪ್ರಮುಖರಾದ ಪುಷ್ಪರಾಜ್ ಚೌಟ ಮಾಣಿ, ಅಭಿಷೇಕ್ ರೈ, ನಾಗೇಶ್ ಶೆಟ್ಟಿ ಕೊಡಂಗಾಯಿ ನಾಗರಾಜ ಆಳ್ವ ಸಾಲೆತ್ತೂರು ಕೃಷ್ಣಪ್ರಸಾದ್ ಶೆಟ್ಟಿ ಮಲರ, ರಮೇಶ್ ಶೆಟ್ಟಿ ಕಾರಾಜೆ, ಆನಂದ ಪೂಜಾರಿ ಸಾಲೆತ್ತೂರು, ಬಂಟ್ವಾಳ ಮಂಡಲ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಉಪಾಧ್ಯಕ್ಷ ವಿನೋದ್ ಶೆಟ್ಟಿ ಪಟ್ಲ ಗುತ್ತು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

vtv vitla
vtv vitla
vtv vitla
vtv vitla
- Advertisement -

Related news

error: Content is protected !!