Saturday, June 28, 2025
spot_imgspot_img
spot_imgspot_img

ವಿಟ್ಲ: ಸಮದ್‌ ಕೊಲೆ ಪ್ರಕರಣ; ಹಲವರನ್ನು ವಶಕ್ಕೆ ಪಡೆದು ವಿಚಾರಣೆ

- Advertisement -
- Advertisement -

ವಿಟ್ಲ; ಸಲಿಂಗಕಾಮಿ ಅದ್ರಾಮ ಯುವಕನನ್ನು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರೋಪಿ ಅದ್ರಾಮನಿಗೆ ಪೊಲೀಸರು ಬಂಧಿಸಿ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಅದ್ರಾಮನಿಗೆ ನಿಕಟವಾಗಿದ್ದ ಹಲವರನ್ನು ಪೊಲೀಸರು‌ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಬಂಟ್ವಾಳ ಇನ್ಸ್ ಪೆಕ್ಟರ್ ನಾಗರಾಜ್ ನೇತೃತ್ವದ ತಂಡ ಈಗಾಗಲೇ ಆರೋಪಿಯ ಆಟೋ ಸೇರಿ, ಹಲವು ವಸ್ತುಗಳನ್ನು ವಶಪಡಿಸಿಕೊಂಡಿದೆ. ಪೊಲೀಸರಿಗೆ ಈ ಪ್ರಕರಣದಲ್ಲಿ ಸಂಶಯ ಬಂದ ಕಾರಣ ಹೆಚ್ಚಿನ‌ ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ಗಾಂಜಾ ಆರೋಪ ಕೇಳಿ ಬಂದ ಹಿನ್ನೆಲೆ ಹಲವರ ವಿಚಾರಣೆ ನಡೆದಿದೆ ಎನ್ನಲಾಗಿದೆ.

- Advertisement -

Related news

error: Content is protected !!