Friday, August 7, 2026
spot_imgspot_img
spot_imgspot_img

ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಆರೋಪಿ ಯುವಕನನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ದಲಿತ್ ಸೇವಾ ಸಮಿತಿಯಿಂದ ವಿಟ್ಲ ಪೊಲೀಸ್ ಠಾಣೆಗೆ ಮನವಿ

- Advertisement -
- Advertisement -

ವಿಟ್ಲ: ಯುವಕನೊಬ್ಬನ ಕಿರುಕುಳ ಮನನೊಂದು ೧೦ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ದಲಿತ್ ಸೇವಾ ಸಮಿತಿ ವತಿಯಿಂದ ವಿಟ್ಲ ಪೊಲೀಸ್ ಠಾಣೆಗೆ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.

ಕಣಿಯೂರು ನಿವಾಸಿ ಸಾಹುಲ್ ಹಮೀದ್ ಎಂಬಾತ ಅಪ್ರಾಪ್ತ ಬಾಲಕಿಗೆ ನಿರಂತರ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

ಈ ಸಂದರ್ಭ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಯು, ಮಾಜಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು, ಮಹಿಳಾ ಉಪಾಧ್ಯಕ್ಷೆ ವಿಮಲ ಸೀಗೆಬಲ್ಲೆ, ಮಾಜಿ ಅಧ್ಯಕ್ಷ ಗಣೇಶ್ ಸೀಗೆಬಲ್ಲೆ, ಸದಸ್ಯ ಶ್ರೀದೇವಿ ಮಜಿ, ಉಪಸ್ಥಿತರಿದ್ದರು.

- Advertisement -

Related news

error: Content is protected !!