Monday, June 30, 2025
spot_imgspot_img
spot_imgspot_img

ಸಮಾಜ ಸೇವೆ ಮೂಲಕ ದುಬೈನಲ್ಲಿ ಗೌರವ ಪಡೆದುಕೊಂಡ ತುಳುನಾಡಿನ ಕಿಶೋರ್.ಶೆಟ್ಟಿ..!?

- Advertisement -
- Advertisement -

ದುಬೈನಲ್ಲಿ ಕರ್ನಾಟಕದಿಂದ ಅದರಲ್ಲೂ ತುಳುನಾಡಿನ ಅನೇಕರು ವ್ಯಾಪಾರ, ಉದ್ಯೋಗ, ಶಿಕ್ಷಣ ಹೀಗೆ ಅನೇಕ ಉದ್ದೇಶಗಳಿಂದ ಏನಾದರೂ ಮಾಡಬೇಕೆಂಬ ಛಲದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುತ್ತಾರೆ. ಹೀಗೆ ಅನೇಕ ರು ತಮ್ಮ ದುಡಿಮೆಯ ಮೂಲಕ ಯಶಸ್ಸನ್ನು ಸಂಪಾದಿಸಿ ತಮ್ಮ ಊರಿನಲ್ಲಿ ಅವಶ್ಯಕತೆ ಇರುವವರಿಗೆ ಸಹಾಯವನ್ನು ಮಾಡುತ್ತಿರುವುದು ಎಲ್ಲರೂ ತಿಳಿದಿರುವ ವಿಚಾರವಾದರೂ ಅಂತಹ ಸಹಾಯ ಮಾಡುವ ಮನಸ್ಸು ಇರುವವರು ಕಡಿಮೆ. ಹೀಗೆ ತೆರೆ ಮರೆಯಲ್ಲಿ ನಿಂತು ತನ್ನಿಂದ ಆದಷ್ಟು ಸಮಾಜ ಸೇವೆಯನ್ನು ಮಾಡುತ್ತಿರುವವರು ಕಾರ್ಕಳ ಕುಂಟಾಡಿ ಮೂಲದ ಕಿಶೋರ್ ಶಿವರಾಮ್ ಶೆಟ್ಟಿ.

ಕಿಶೋರ್ ಶಿವರಾಮ್ ಶೆಟ್ಟಿ ದುಬೈನಲ್ಲಿ ಕಳೆದ ಹತ್ತು ವರ್ಷದಿಂದ ವಾಸವಾಗಿದ್ದಾರೆ. ತನ್ನ ಸಂಪಾದನೆಯಲ್ಲಿ ಅನೇಕ ಶಿಕ್ಷಣ ಉದ್ಯೋಗ ಚಿಕಿತ್ಸೆಗಾಗಿ ಸಹಾಯ ಮಾಡಲಾರಂಭಿಸಿದರು. ಕೋವಿಡ್ ಸಂದರ್ಭದಲ್ಲಿ ಅನೇಕರಿಗೆ ಇವರು ನೆರವಾಗುವ ಮೂಲಕ ಅನೇಕ ಕುಟುಂಬದ ಕಣ್ಣೀರನ್ನು ಒರೆಸುವ ಪ್ರಯತ್ನವನ್ನು ಮಾಡಿದ್ದಾರೆ. ಕೋವಿಡ್ ಸಂದರ್ಬದಲ್ಲಿ ಇವರ ಸೇವೆಗೆ ಇವರಿಗೆ ದುಬೈನಲ್ಲಿ ಗೌರವಕೂಡ ದೊರಕಿದೆ. ಉಡುಪಿಯ ಕಾರ್ಕಳ ಮೂಲದ ಮನೆತನದವರಾದರೂ ಹುಟ್ಟಿದ್ದು, ಬೆಳೆದಿದ್ದು ವಿದ್ಯಾಭ್ಯಾಸ ಎಲ್ಲವೂ ಮುಂಬೈನಲ್ಲಿ. ಮುಂಬೈನ ಡೊಂಬಿವಿಲಿಯಲ್ಲಿ ವಾಸವಾಗಿದ್ದವರು ಜೀವನದಲ್ಲಿ ಏನಾದರೂ ಮಾಡಬೇಕೆಂಬ ಛಲ ಉಳ್ಳ ವ್ಯಕ್ತಿಯಾಗಿದ್ದು, ಅವರಿಗೆ ದುಬೈನ ಖ್ಯಾತ ಸಂಸ್ಥೆ ಡಾ||ಬು ಅಬ್ದುಲ್ಲಾ ಗ್ರೂಪ್ನಲ್ಲಿ ಉದ್ಯೋಗವಕಾಶ ಹುಡುಕಿ ಬಂತು ಹೀಗೆ ದುಬೈಗೆ ಹೋದ ಕಿಶೋರ್ ಸದಾ ಸಮಾಜ ಸೇವೆಯ ಬಗ್ಗೆ ಹೆಚ್ಚು ಯೋಚಿಸಲಾರಂಭಿಸಿದರು.

ಇವರು ಸ್ವತಃ ಒಬ್ಬ ಕ್ರೀಡಾ ಪಟು ಆಗಿದ್ದು, ಇವರ ಹೆಸರಿನಲ್ಲಿ ಗಿನ್ನಿಸ್ ದಾಖಲೆ ಕೂಡ ಇದೆ. ದುಬೈನಲ್ಲಿ ನಡೆದ ಅನೇಕ ರಾಷ್ಟ್ರಗಳ ರಾಷ್ಟ್ರಗೀತೆ ಹಾಡುವ ಕಾರ್ಯಕ್ರಮದಲ್ಲಿ ಗಿನ್ನಿಸ್ ದಾಖಲೆಯ ಪುರಸ್ಕಾರಕ್ಕೆ ಪಾತ್ರವಾಗಿದ್ದರು. ಇವರಿಗೆ ದುಬೈನಲ್ಲಿ ಅನೇಕ ಪ್ರಶಸ್ತಿಗಳು ದೊರಕಿವೆ. ಇವರು ಸರಳ ವ್ಯಕ್ತಿತ್ವಹೊಂದಿದವರು ಯಾವುದೇ ಅಹಂಕಾರವಿಲ್ಲದೆ ಎಲ್ಲರೊಂದಿಗೆ ಪ್ರೀತಿಯಿಂದ ಬೆರೆಯುತ್ತಾರೆ. ದುಬೈನಲ್ಲಿದ್ದರು ಊರಿನವರ ಕಷ್ಟಕ್ಕೆ ಸ್ಪಂದಿಸುತ್ತಾರೆ. ಆಸ್ಟ್ರೀಲಿಯಾ ನ್ಯೂಜಿಲೆಂಡ್, ಗಲ್ಪ್ ರಾಷ್ಟ್ರ ಹೀಗೆ ಅನೇಕ ರಾಷ್ಟ್ರಕ್ಕೆ ಬೇಟಿ ನೀಡಿದ್ದು, “ಮಂಗಳೂರು ಮತ್ತು ತುಳು ಭಾಷೆಗೆ ತನ್ನ ಹೃದಯದಲ್ಲಿ ವಿಷೇಶ ಸ್ಥಾನ ಇದೆ” ಎನ್ನುತ್ತಾರೆ ಕಿಶೋರ್ ಶೆಟ್ಟಿ.

- Advertisement -

Related news

error: Content is protected !!