Monday, June 30, 2025
spot_imgspot_img
spot_imgspot_img

ಸಿಲಿಕಾನ್‌ ಸಿಟಿಯಲ್ಲಿ ಕಾಸರಗೋಡು ಮೂಲದ ವ್ಯಕ್ತಿಯ ಬರ್ಬರ ಕೊಲೆ

- Advertisement -
- Advertisement -

ಕಾಸರಗೋಡು: ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಕಾಸರಗೋಡು ಮೂಲದ ಯುವಕನನ್ನು ತಂಡವೊಂದು ಇರಿದು ಕೊಲೆಗೈದ ಘಟನೆ ನಡೆದಿದೆ.

ಜಿಗಣಿ ಟಾಟಾ ಮೆಕಾನಿಕಲ್ ವಿಭಾಗದ ಉದ್ಯೋಗಿ, ಕಾಸರಗೋಡು ರಾಜಪುರ ಚೆರುವೆಲ್ ನ ಸಾನು ಥೋಮ್ಸನ್(31) ಕೊಲೆಗೀಡಾದವನು. ರಾತ್ರಿ ಕೆಲಸ ಮುಗಿಸಿ ನಡೆದುಕೊಂಡು ಬರುತ್ತಿದ್ದಾಗ ಬೈಕ್ ನಲ್ಲಿ ಬಂದ ಮೂವರ ತಂಡವೊಂದು ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದೆ. ಘಟನಾ ಸ್ಥಳದ ಸಿಸಿ ಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದು, ಕೊಟೇಶನ್ ತಂಡ ಕೃತ್ಯ ನಡೆಸಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.

ಏಳು ವರ್ಷಗಳಿಂದ ಥೋಮ್ಸನ್ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ತಂಡವು ಇನ್ನೊಬ್ಬ ವ್ಯಕ್ತಿಯ ಕೊಲೆಗೆ ಸಂಚು ನಡೆಸಿತ್ತು. ಆದರೆ ಗುರಿ ತಪ್ಪಿ ಥೋಮ್ಸನ್ ನ ಕೊಲೆ ನಡೆಸಿದೆ ಎಂಬ ಅನುಮಾನವೂ ಉಂಟಾಗಿದೆ. ಘಟನೆ ಸುದ್ದಿ ತಿಳಿದು ಕಾಸರಗೋಡಿನಲ್ಲಿರುವ ಸಂಬಂಧಿಕರು ಬೆಂಗಳೂರಿಗೆ ತೆರಳಿದ್ದು, ಬೆಂಗಳೂರಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಊರಿಗೆ ತರಲಾಗುವುದು. ರಾಜಾಪುರ ಹೋಲಿ ಫ್ಯಾಮಿಲಿ ಚರ್ಚ್ ನಲ್ಲಿ ಅಂತ್ಯ ಕ್ರಿಯೆ ನೆರವೇರಲಿದೆ.

- Advertisement -

Related news

error: Content is protected !!