- Advertisement -
- Advertisement -


ಸುಳ್ಯ: ನಾಲ್ಕು ವರ್ಷದ ಮಗಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ತಾಯಿ ಸಾವನ್ನಪ್ಪಿದ್ದು ಮಗು ಅದೃಷ್ಟವಶಾತ್ ಬದುಕುಳಿದಿದೆ.
ಅಗ್ನಿಶಾಮಕ ದಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಗೀತಾ ಎನ್ಎಂಸಿಯಲ್ಲಿ ಕ್ಲರ್ಕ್ ಆಗಿ ಕೆಲಸಮಾಡುತ್ತಿದ್ದರು. ಗೀತಾ ತನ್ನ 4 ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮುಂಜಾನೆ ಎದ್ದಾಗ ಗೀತಾ ಮನೆಯಲ್ಲಿ ಇಲ್ಲದಿರುವುದನ್ನು ಕಂಡು ಹುಡುಕಾಡಿದಾಗ ಬಾವಿಯಲ್ಲಿ ಮಗಳು ಮತ್ತು ಪತ್ನಿ ಬಿದ್ದಿರುವುದು ಕಂಡುಬಂತು. ಮಗಳು ಬಾವಿಯೊಳಗೆ ಕಲ್ಲಿನ ಸಹಾಯದಿಂದ ಬದುಕುಳಿದಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- ಆರ್ಟಿಒ ಅಧಿಕಾರಿಗಳ ವಿಶೇಷ ಕಾರ್ಯಾಚರಣೆ – 390 ಖಾಸಗಿ ಶಾಲಾ ವಾಹನಗಳು ಸೀಜ್
- ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯಿಂದ ದುಬೈಗೆ? ಜಲೀಲ್ ಬಾಬಾ ಎಸ್ಕೇಪ್!
- ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಐವಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ನಿರ್ಧಾರ
- 20 ವರ್ಷ ಹಳೆಯ ದ್ವಿಚಕ್ರ ವಾಹನ ನಾಪತ್ತೆ; ದೂರು ನೀಡಲು ಸೂಚಿಸಿದರೂ ಠಾಣೆಗೆ ಬಾರದ ಮಾಲೀಕ
- ಸಾರ್ವಜನಿಕ ಪರೀಕ್ಷಾ ಅಕ್ರಮಗಳಿಗೆ ಬ್ರೇಕ್: ಕಠಿಣ ಶಿಕ್ಷೆ ಮಸೂದೆ ಲೋಕಸಭೆಯಲ್ಲಿ ಮಂಡನೆ


- Advertisement -








