- Advertisement -
- Advertisement -


ಸುಳ್ಯ: ನಾಲ್ಕು ವರ್ಷದ ಮಗಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ತಾಯಿ ಸಾವನ್ನಪ್ಪಿದ್ದು ಮಗು ಅದೃಷ್ಟವಶಾತ್ ಬದುಕುಳಿದಿದೆ.
ಅಗ್ನಿಶಾಮಕ ದಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಗೀತಾ ಎನ್ಎಂಸಿಯಲ್ಲಿ ಕ್ಲರ್ಕ್ ಆಗಿ ಕೆಲಸಮಾಡುತ್ತಿದ್ದರು. ಗೀತಾ ತನ್ನ 4 ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮುಂಜಾನೆ ಎದ್ದಾಗ ಗೀತಾ ಮನೆಯಲ್ಲಿ ಇಲ್ಲದಿರುವುದನ್ನು ಕಂಡು ಹುಡುಕಾಡಿದಾಗ ಬಾವಿಯಲ್ಲಿ ಮಗಳು ಮತ್ತು ಪತ್ನಿ ಬಿದ್ದಿರುವುದು ಕಂಡುಬಂತು. ಮಗಳು ಬಾವಿಯೊಳಗೆ ಕಲ್ಲಿನ ಸಹಾಯದಿಂದ ಬದುಕುಳಿದಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- ವೀರಕಂಬ ಗ್ರಾಮ ಪಂಚಾಯತ್ ಸದಸ್ಯ ರಘು ಪೂಜಾರಿ ನಿಧನ
- 30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಅರೆಸ್ಟ್
- ಟೀಮ್ ಕಲ್ಲೇಗ ಟೈಗರ್ಸ್ ಆಶ್ರಯದಲ್ಲಿ ಅಕ್ಷಯ್ ಕಲ್ಲೇಗ ಅವರ ಜನ್ಮದಿನದ ಪ್ರಯುಕ್ತ ಮಂಜಲ್ಪಡ್ಪು ಬಿಇಎಂ ಹಿ.ಪ್ರಾ.ಶಾಲೆಗೆ ಕಂಪ್ಯೂಟರ್ ಕೊಡುಗೆ ಹಾಗೂ ಇತರ ಸರ್ಕಾರಿ ಶಾಲೆಗಳಿಗೆ ಸೀಲಿಂಗ್ ಫ್ಯಾನ್ ಮತ್ತು ಪುಸ್ತಕ ವಿತರಣ ಕಾರ್ಯಕ್ರಮ
- ಮಂಗಳೂರು: ಕೇರಳ ಸರ್ಕಾರಿ ಬಸ್ಗೆ ಕಾರು ಡಿಕ್ಕಿ; ಚಾಲಕನಿಗೆ ಗಾಯ
- ಮಂಜೇಶ್ವರ: ಹಲ್ಲೆ ಪ್ರಕರಣ: ಆರೋಪಿಯ ಬಂಧನ..!


- Advertisement -