Friday, May 17, 2024
spot_imgspot_img
spot_imgspot_img

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್ ಸ್ಫೋಟ; ಬಾಲಕ ಮೃತ್ಯು

- Advertisement -G L Acharya panikkar
- Advertisement -

ಬೆಂಗಳೂರು: ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬಾಲಕ ದುರ್ಮರಣ ಹೊಂದಿರುವ ದಾರುಣ ಘಟನೆ ನಗರದ ಹೆಬ್ಬಾಳದ ಗುಡ್ಡದಹಳ್ಳಿಯಲ್ಲಿ ನಡೆದಿದೆ.

ಮಹೇಶ್(13) ಮೃತ ಬಾಲಕ. ಗ್ಯಾಸ್​​ ರೀಫಿಲ್ಲಿಂಗ್​ ಅಡ್ಡೆ ಬಳಿ ನಿಂತುಕೊಂಡಿದ್ದಾಗ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ಬಾಲಕ ಗಂಭೀರ ಗಾಯಗೊಂಡಿದ್ದ. ಬ್ಯಾಪ್ಟಿಸ್ಟ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಬಾಲಕ ಮಹೇಶ್​ ಮೂಲತಃ ಯಾದಗಿರಿ ಜಿಲ್ಲೆಯ ರಾಮಸಮುದ್ರ ಗ್ರಾಮದವನು. ಕೂಲಿ ಕಾರ್ಮಿಕ ದಂಪತಿ ಮಲ್ಲಪ್ಪ , ಸರಸ್ವತಿಯವರ 2ನೇ ಪುತ್ರನಾಗಿದ್ದು ಸದ್ಯ ಬ್ಯಾಪ್ಟಿಸ್ಟ್​ ಆಸ್ಪತ್ರೆ ಎದುರು ಮಹೇಶ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಬಾಲಕ ಮಹೇಶ್​ ಚೋಳನಾಯಕನಹಳ್ಳ ಅಲ್ಲಿನ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಓದುತ್ತಿದ್ದ. ಕಳೆದ ಎಂಟು ವರ್ಷಗಳಿಂದ ಮೃತರ ಪೊಷಕರು ಕೂಲಿ ಕೆಲಸ ಮಾಡುತ್ತಿದ್ದರು. ದೇವರಾಜ್ ಎಂಬುವರಿಗೆ ಸೇರಿದ ಸಿಲಿಂಡರ್ ರೀಫಿಲ್ಲಿಂಗ್ ಮಾಡುವ ಗೋಡೌನ್​ನಲ್ಲಿ ಲಿಯಾಕತ್ ಎಂಬುವನು ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ. ಈ ವೇಳೆ ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದ ಸಿಲಿಂಡರ್​ ಸ್ಫೋಟಗೊಂಡಿದೆ. ಸಿಲಿಂಡರ್ ಬ್ಲಾಸ್ಟ್ ರಭಸಕ್ಕೆ ಬಾಲಕನ ದೇಹ ಛಿದ್ರವಾಗಿದೆ ಎನ್ನಲಾಗುತ್ತಿದೆ. ಸದ್ಯ ಘಟನೆಯ ಬೆನ್ನೆಲೆ ಲಿಯಾಕತ್​ ಎಸ್ಕೇಪ್ ಆಗಿದ್ದು, ಆತನ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!