Friday, April 19, 2024
spot_imgspot_img
spot_imgspot_img

ಅಕ್ರಮ ಹಣ ವರ್ಗಾವಣೆ ಪ್ರಕರಣ; ನ.9ರವರೆಗೆ ಸಂಜಯ್ ರಾವುತ್ ಗೆ ನ್ಯಾಯಾಂಗ ಬಂಧನ ವಿಸ್ತರಣೆ

- Advertisement -G L Acharya panikkar
- Advertisement -

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ನವೆಂಬರ್ 9ರವರೆಗೆ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶಿಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ನಿಯೋಜಿತವಾಗಿರುವ ವಿಶೇಷ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ, ಪ್ರಕರಣದ ಸಹ ಆರೋಪಿ ಪ್ರವೀಣ್ ರಾವುತ್ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ನವೆಂಬರ್ 9 ರಂದು ಆದೇಶವನ್ನು ಹೊರಡಿಸುವುದಾಗಿ ಹೇಳಿದ್ದಾರೆ.

ಇನ್ನು ಪತ್ರಾ ಚಾಲ್ ಮರುಅಭಿವೃದ್ಧಿಗೆ ಸಂಬಂಧಿಸಿದಂತೆ ಹಣಕಾಸು ಅಕ್ರಮಗಳಲ್ಲಿ ಅವರ ಪಾತ್ರದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಈ ವರ್ಷದ ಜುಲೈನಲ್ಲಿ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಅವರನ್ನು ಬಂಧಿಸಿತ್ತು.

- Advertisement -

Related news

error: Content is protected !!