Sunday, May 19, 2024
spot_imgspot_img
spot_imgspot_img

ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಸಹೋದರಿಯನ್ನು ಕೊಲೆಗೈದ ಅಣ್ಣ..!

- Advertisement -G L Acharya panikkar
- Advertisement -

ತಮಿಳುನಾಡು: ಅತಿಯಾದ ಮೊಬೈಲ್​ ಬಳಕೆ ಮಾಡ್ತಿದ್ದ ಸಹೋದರಿಯನ್ನ ಅಣ್ಣನೊಬ್ಬ ಕೊಲೆ ಮಾಡಿರುವ ಘಟನೆ ತೂತುಕುಡಿಯ ವಾಸವಪ್ಪಪುರಂ ಗ್ರಾಮದಲ್ಲಿ ನಡೆದಿದೆ.

ಕವಿತಾ(17) ಅಣ್ಣನಿಂದಲೇ ಮೃತಪಟ್ಟ ದುರ್ದೈವಿ. ಕಳೆದ ಕೆಲ ತಿಂಗಳಿಂದ ಕವಿತಾ ಮಲೈರಾಜ್ ಮೊಬೈಲ್​​ನಲ್ಲಿ ಫೇಸ್​ಬುಕ್​, ವಾಟ್ಸ್​​​ಆ್ಯಪ್​ ಬಳಕೆ ಮಾಡುತ್ತಿದ್ದಳು. ಹಾಗೂ ರಾತ್ರಿಯಿಡೀ ಗೇಮ್​ ಆಡುತ್ತಿದ್ದಳು. ಇದರಿಂದ ಆಕ್ರೋಶಗೊಂಡ ಆಕೆಯ ಅಣ್ಣ ಮಲೈರಾಜ ಇನ್ನು ಮುಂದೆ ಮೊಬೈಲ್ ಬಳಕೆ ಮಾಡದಂತೆ ಎಚ್ಚರಿಕೆ ನೀಡಿದ್ದನು.

ಅಣ್ಣನ ಮಾತು ಕೇಳದ ಕವಿತಾ ತನ್ನ ಕೆಲಸ ಮುಂದುವರೆಸಿದ್ದಳು. ನಿನ್ನೆ ಸಂಜೆ ಈ ವಿಚಾರದ ಬಗ್ಗೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಕುಪಿತಗೊಂಡಿರುವ ಮಲೈರಾಜ ಕುಡುಗೋಲಿನಿಂದ ಸಹೋದರಿ ಮೇಲೆ ಹಲ್ಲೆ ನಡೆಸಿದ್ದಾನೆ.

ಪರಿಣಾಮ ತೀವ್ರ ರಕ್ತಸ್ರಾವವಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಮಲೈರಾಜನನ್ನ ಬಂಧನ ಮಾಡಿ, ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!