- Advertisement -
- Advertisement -
ಅನಂತಾಡಿ: ಕರಿಂಕ ಶ್ರೀ ದುರ್ಗಾಪರಮೇಶ್ವರಿ ವರ್ಷಾವಧಿ ಜಾತ್ರೆಯು ಬ್ರಹ್ಮಶ್ರೀ ನೀಲೇಶ್ವರ ವೇದಮೂರ್ತಿ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಮೇ.2 ಸೋಮವಾರದಂದು ರಾತ್ರಿ 8 ರಿಂದ ಮಹೋತ್ಸವ, ಉತ್ಸವ ಬಲಿ, ಶ್ರೀ ಭೂತ ಬಲಿ ನಡೆದು ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಇದೇ ದಿನ ಕಲಾಶ್ರೀ ಕುಸಾಲ್ದ ಕಲಾವಿದೆರ್ ಬೆದ್ರ ಇವರಿಂದ ನಾಲಯಿ ಮಗುರುಜಿ ಎಂಬ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.
ಮೇ.3 ಮಂಗಳವಾರದಂದು ಬೆಳಿಗ್ಗೆ 9ರಿಂದ ಹಗಲು ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ವಿತರಣೆ ನಡೆದು, ಮದ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಮೇ 12 ರಂದು ಪ್ರತಿಷ್ಠಾ ವರ್ಧಂತ್ಯೋತ್ಸವದ ಅಂಗವಾಗಿ ಬೆಳಗ್ಗೆ 9 ಗಂಟೆಗೆ ಗಣಪತಿ ಹೋಮ, ಕಲಶಾಭಿಷೇಕ, ಸಾರ್ವಜನಿಕ ಅನ್ನಸಂತರ್ಪಣೆ ರಾತ್ರಿ 7 ಗಂಟೆಗೆ ರಂಗಪೂಜೆ ನಡೆಯಲಿದೆ.
- Advertisement -