Friday, May 24, 2024
spot_imgspot_img
spot_imgspot_img

ಅಪರೂಪದ ಬರ್ಕ ಜಿಂಕೆ ಬೇಟೆ: ಮೂವರ ಬಂಧನ

- Advertisement -G L Acharya panikkar
- Advertisement -

ಹಾಸನ: ಅಪರೂಪದ ಬರ್ಕ ಜಿಂಕೆ ಬೇಟೆಯಾಡಿದ್ದ ಮೂವರು ಬೇಟೆಗಾರರನ್ನು ಯಸಳೂರು ಪ್ರಾದೇಶಿಕ ಅರಣ್ಯ ವಲಯದ ಸಿಬ್ಬಂದಿ ಬಂಧಿಸಿದ್ದಾರೆ.

ಅತ್ತಿಹಳ್ಳಿ ಗ್ರಾಮದ ಧರ್ಮೇಗೌಡ, ಯಾಚೀನಮನೆ ಗ್ರಾಮದ ಸುಬ್ರಮಣ್ಯ, ಬೆಟ್ಟದಮನೆ ಗ್ರಾಮದ ಸುರೇಶ್ ಬಂಧಿತ ಆರೋಪಿಗಳು. ಆರೋಪಿಗಳು ಜಿಲ್ಲೆಯ ಸಕಲೇಶಪುರ ತಾಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ಬರ್ಕ ಜಿಂಕೆಯನ್ನು ಬಂದೂಕಿನಿಂದ ಭೇಟೆಯಾಡಿ ಕೊಟ್ಟಿಗೆಯಲ್ಲಿ ಮಾಂಸ ಕತ್ತರಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಬಂಧಿತರಿಂದ 9.5 ಕೆ.ಜಿ. ಮಾಂಸ, ಒಂದು ಬಂದೂಕು ಹಾಗೂ ಒಂದು ಕತ್ತಿಯನ್ನು ವಶಕ್ಕೆ ಪಡೆದಿದ್ದಾರೆ. ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!