- Advertisement -
- Advertisement -



ಅರಣ್ಯದಲ್ಲಿ ಅನಾಥವಾಗಿ ಬಿದ್ದಿದ್ದ ಸೂಟ್ಕೇಸ್ ತೆರೆದ ಪೊಲೀಸರು ಅದರಲ್ಲಿದ್ದ ವ್ಯಕ್ತಿಯೊಬ್ಬನ ಶವವನ್ನು ಕಂಡು ಶಾಕ್ ಆಗಿದ್ದಾರೆ. ಒಡಿಶಾದ ಖೋರ್ಧಾ ಜಿಲ್ಲೆಯ ನಚುನಿ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪುರ ಗ್ರಾಮದ ಸಮೀಪ ಇರುವ ಅರಣ್ಯದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನೋರಂಜನ್ ಮೋಹಪಾತ್ರ (32) ಎಂದು ಗುರುತಿಸಲಾಗಿದೆ.
ಉರುವಲು ಸಂಗ್ರಹಿಸಲು ಕಾಡಿಗೆ ತೆರಳಿದ್ದ ವೇಳೆ ನಿಗೂಢ ಸ್ಥಿತಿಯಲ್ಲಿ ಬಿದ್ದಿದ್ದ ಸೂಟ್ಕೇಸ್ನ್ನು ಕೆಲ ಸ್ಥಳೀಯರು ಗಮನಿಸಿ, ಪೊಲೀಸರಿಗೆ ಮಾಹಿತಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ನಾಚುಣಿ ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿನ ರಹಸ್ಯ ಭೇದಿಸಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ಸಾಕ್ಷ್ಯಾಧಾರಗಳ ಪ್ರಕಾರ ಇದು ಕೊಲೆ ಎಂದು ಶಂಕಿಸಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಅಧಿಕೃತ ವಿಷಯ ತಿಳಿಯಲಿದೆ ಎಂದು ಬಲುಗಾಂವ್ ಎಸ್ಡಿಪಿಒ ಮಾನಸ್ ರಂಜನ್ ಬಾರಿಕ್ ಮಾಹಿತಿ ನೀಡಿದರು.
- Advertisement -