- Advertisement -
- Advertisement -
ಅರೆ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಚಿತ್ರಾವತಿ ಬಳಿ ನಡೆದಿದೆ.
ಚಿತ್ರಾವತಿ ಬಳಿಯ ಡಿಎಡ್ ಕಾಲೇಜು ಬಳಿ ರಾಗಿ ಹೊಲದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಅರೆ ಬೆತ್ತಲೆಯಾಗಿ ಮಹಿಳೆ ಮೃತಪಟ್ಟಿದ್ದಾಳೆ. ಮಹಿಳೆಯ ಮುಖವನ್ನು ಜಜ್ಜಿ ಕೊಲೆ ಮಾಡಲಾಗಿದೆ. ಇನ್ನೂ ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಡಿವೈಎಸ್ಪಿ ವಾಸುದೇವ್, ಸಿಪಿಐ ರಾಜು ಹಾದಿಯಾಗಿ ಎಸ್ಐ ಪ್ರದೀಪ್ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಮಹಿಳೆ ಸರಿಸುಮಾರು 30 ವರ್ಷ ಪ್ರಾಯದವರಾಗಿದ್ದಾರೆ. ವೇಶ್ಯಾವಾಟಿಕೆಗೆ ಕರೆ ತಂದು ಯಾರಾದರೂ ಕೊಲೆ ಮಾಡಿ ಹೋಗಿದ್ದರಾ ಎಂಬ ಅನುಮಾನ ಮೂಡಿದೆ. ಉತ್ತರ ಭಾರತ ಮೂಲದ ಹೆಣ್ಣುಮಗಳ ರೀತಿ ಕಾಣುತ್ತಿದ್ದು, ಮೃತಳ ಗುರುತು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.
- Advertisement -