Saturday, April 20, 2024
spot_imgspot_img
spot_imgspot_img

ಅ.​24 ರಂದು ಮನ್​ ಕೀ ಬಾತ್​; ಸಾರ್ವಜನಿಕರಿಂದ ಅನಿಸಿಕೆ ಆಹ್ವಾನಿಸಿದ ಪ್ರಧಾನಿ ಮೋದಿ

- Advertisement -G L Acharya panikkar
- Advertisement -
driving

ನವದೆಹಲಿ: ಅಕ್ಟೋಬರ್​ 24ರಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ರೇಡಿಯೋ ಕಾರ್ಯಕ್ರಮ ಮನ್​ ಕೀ ಬಾತ್​​ನ 82ನೇ ಆವೃತ್ತಿಯಲ್ಲಿ ಮಾತನಾಡಲಿದ್ದಾರೆ. ಈ 82ನೇ ಎಪಿಸೋಡ್​​ನ ಮನ್​ ಕೀ ಬಾತ್​​ಗಾಗಿ ವಿಚಾರಗಳು, ಆಲೋಚನೆಗಳನ್ನು ಹಂಚಿಕೊಳ್ಳುವಂತೆ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ತಿಂಗಳೂ ಈ ಮನ್​ ಕೀ ಬಾತ್​ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಇದರಲ್ಲಿ ಅವರು ರಾಜಕೀಯ ಹೊರತಾಗಿ ಬೇರೆ ವಿಶೇಷ ವಿಷಯಗಳ ಬಗ್ಗೆ ಉಲ್ಲೇಖ ಮಾಡುತ್ತಾರೆ. ಕಳೆದ ಮನ್​ ಕೀ ಬಾತ್​​ನಲ್ಲಿ ನದಿಗಳ ಮಹತ್ವ ತಿಳಿಸಿದ್ದರು. ನದಿಗಳ ದಿನದ ನೆನಪು ಮಾಡಿಕೊಟ್ಟಿದ್ದರು. ಹಾಗೇ ಟ್ವೀಟ್ ಮಾಡಿ, ಈ ತಿಂಗಳ ಮನ್​ ಕೀ ಬಾತ್​​ಗಾಗಿ ಅನಿಸಿಕೆ ಹಂಚಿಕೊಳ್ಳಲು ಸಾರ್ವಜನಿಕರಿಗೆ ತಿಳಿಸಿದ್ದಾರೆ.

ದೇಶದಲ್ಲಿ ಕೊವಿಡ್ 19 ಲಸಿಕೆ ಅಭಿಯಾನ ಭರ್ಜರಿಯಾಗಿ ಸಾಗುತ್ತಿದೆ. ಮುಂದಿನ ವಾರ 100 ಕೋಟಿ ಗಡಿಯನ್ನೂ ದಾಟಿ ದಾಖಲೆ ನಿರ್ಮಿಸಲಿದೆ. ಇದರ ಮಧ್ಯೆ ದೇಶದಲ್ಲಿ ಕೊರೊನಾ ಸೋಂಕಿನ ಪ್ರಸರಣವೂ ತುಸು ಕಡಿಮೆಯಾಗಿದ್ದು, ಕೊವಿಡ್​ 19 ಶಿಷ್ಟಾಚಾರಗಳ ಪಾಲನೆಯಲ್ಲೂ ಸಡಿಲತೆ ಕಂಡುಬಂದಿದೆ. ಹೀಗೆ ಸುಮಾರು ವಿಷಯಗಳಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಬಾರಿ ತಮ್ಮ ಮನ್​ ಕೀ ಬಾತ್​​ನಲ್ಲಿ ಯಾವ ವಿಚಾರವನ್ನು ಮಾತಿಗೆ ಎತ್ತಿಕೊಳ್ಳಬಹುದು ಎಂಬುದು ಕುತೂಹಲ ಹುಟ್ಟಿಸಿದೆ.

ಈ ಬಗ್ಗೆ ಪ್ರಧಾನಮಂತ್ರಿ ಕಚೇರಿ ಕೂಡ ಹೇಳಿಕೆ ಬಿಡುಗಡೆ ಮಾಡಿದೆ. ನರೇಂದ್ರ ಮೋದಿಯವರು ಇದೇ ಭಾನುವಾರ ಅಂದರೆ ಅಕ್ಟೋಬರ್​ 24ರಂದು 82ನೇ ಎಪಿಸೋಡ್​​ನ ಮನ್​ ಕೀ ಬಾತ್​ ನಡೆಸಿಕೊಡಲಿದ್ದಾರೆ. ಅದಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರೂ ತಮ್ಮ ಅನಿಸಿಕೆ, ಅಭಿಪ್ರಾಯ, ವಿಚಾರಗಳನ್ನು ನಮೋ ಆ್ಯಪ್​, ಮೈ ಗವ್​ (NaMo App and My Gov)ಮೂಲಕ ಹಂಚಿಕೊಳ್ಳಬಹುದು. ಇಲ್ಲದೆ ಇದ್ದರೆ ತಮ್ಮ ಅನಿಸಿಕೆಯನ್ನು ರೆಕಾರ್ಡ್​ ಮಾಡಿ 1800-11-7800ಕ್ಕೆ ಕಳಿಸಬಹುದು ಎಂದು ಹೇಳಿದೆ.

- Advertisement -

Related news

error: Content is protected !!