- Advertisement -
- Advertisement -
ವಿಟ್ಲ: ಅ.24ರಂದು ವಿಟ್ಲ ಶ್ರೀಪಂಚಲಿಂಗೇಶ್ವರ ಕ್ಷೇತ್ರದಲ್ಲಿ ಆಲಂಪಾಡಿ ಶ್ರೀಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ, ಶ್ರೀ ಕ್ಷೇತ್ರದಲ್ಲಿ ಲೋಕಕಲ್ಯಾಣಾರ್ಥವಾಗಿ ಮತ್ತು ಸಾನಿಧ್ಯ ವೃದ್ಧಿಗಾಗಿ “ಶತರುದ್ರಾಭಿಷೇಕ” ನಡೆಯಲಿರುವುದು.
ಭಕ್ತಾದಿಗಳು ತೆಂಗಿನಕಾಯಿ ಬಾಳೆ ಎಲೆ ಹಾಗೂ ಹೂವು ಇನ್ನಿತರ ವಸ್ತುಗಳನ್ನು ಈ ಕಾರ್ಯಕ್ರಮಕ್ಕಾಗಿ ಅರ್ಪಿಸಿ ಶ್ರೀದೇವರ ಕೃಪೆಗೆ ಪಾತ್ರರಾಗಬೇಕಾಗಿ, ವಿಟ್ಲ ಶ್ರೀ ಪಂಚಲಿಂಗೇಶ್ವರ ಕ್ಷೇತ್ರದ ಅನುವಂಶಿಕ ಮುಕ್ತೇಸರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -