- Advertisement -
- Advertisement -
ಕೊಡಗು: ಆನೆ ಹಲ್ಲು ಮಾರಾಟ ಮಾಡಲು ಯತ್ನಿಸಿದ ಇಬ್ಬರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಮತ್ತಿಬ್ಬರು ಪರಾರಿಯಾಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಮೇಕೂರು ಹೊಸ್ಕರೆ ಬಳಿ ನಡೆದಿದೆ.
ಬಂಧಿತರನ್ನು ಮಧು (21) ಹಾಗೂ ಮೋಹನ್ ಚಂದ್ರ (25) ಎಂದು ಗುರುತಿಸಲಾಗಿದೆ. 20 ಕೆಜಿ ತೂಕದ 3 ಆನೆ ದವಡೆ ಹಲ್ಲುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಂತ ಸಹಿತ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗನ್ನು ಸಹ ಜಪ್ತಿ ಮಾಡಲಾಗಿದೆ.
ಮಡಿಕೇರಿಯ ಅರಣ್ಯ ಸಂಚಾರಿ ದಳದ ಅಧಿಕಾರಿಗಳಿಂದ ಕಾರ್ಯಚರಣೆ ನಡೆದಿದ್ದು, ನಾಪತ್ತೆಯಾಗಿರುವ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ
- Advertisement -