Friday, May 10, 2024
spot_imgspot_img
spot_imgspot_img

ಆಯುಧ ಪೂಜೆ ದಿನವೇ ದುರ್ಘಟನೆ; ಕೋಳಿ ಅಂಗಡಿ ಬಳಿ ಕುಳಿತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು!

- Advertisement -G L Acharya panikkar
- Advertisement -
driving

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಅಂಗಡಿ ಬಳಿ ಕುಳಿತಿದ್ದವರ ಮೇಲೆ ಲಾರಿ ಹರಿದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮರಳಿಗ ಗ್ರಾಮದಲ್ಲಿ ಆಯುಧ ಪೂಜೆ ದಿನ ಈ ದುರ್ಘಟನೆ ನಡೆದಿದೆ.

ಮೃತರನ್ನು ಕೀಳಘಟ್ಟ ಗ್ರಾಮದ ಗಿರೀಶ್ ಶೆಟ್ಟಿ (50) ಮತ್ತು ಎನ್ ಕೋಡಿ ಹಳ್ಳಿ ಗ್ರಾಮದ ಲೋಕೇಶ (44) ಎನ್ನಲಾಗಿದೆ. ಗಿರೀಶ್ ಶೆಟ್ಟಿ ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ಲೋಕೇಶ್ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ಕೋಳಿ ಅಂಗಡಿಯ ಮಾಲೀಕ ನಿಂಗೇಗೌಡಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೆಸಗರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!