ಅದ್ಧೂರಿಯಾಗಿ ಆರತಕ್ಷತೆ ಮುಗಿದು ಇನ್ನೇನು ತಾಳಿ ಕಟ್ಟುವ ಸಂದರ್ಭದಲ್ಲಿ ವಧು ಹಸೆಮಣೆಯಿಂದ ಎದ್ದುಹೋದ ಅಪರೂಪ ಪ್ರಕಣ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕೊಳಾಲದಲ್ಲಿ ನಡೆದಿದೆ.
ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ಈ ಮದುವೆ ಬೇಡ ಎಂದ ವಧು ಹಸೆಮಣೆಯಿಂದ ಮೇಲೆದ್ದಿದ್ದಾಳೆ. ರಿಸೆಪ್ಷನ್ನಲ್ಲಿ ನಗುನಗುತ್ತಲೇ ಫೋಟೋಗೆ ಫೋಸ್ ಕೊಟ್ಟಿದ್ದು ಇದೀಗ ತಾಳಿ ಕಟ್ಟುವ ಮುಹೂರ್ತ ಸಮೀಪಿಸುತ್ತಿದ್ದಂತೆಯೇ ಯುವತಿ ಈ ಮದ್ವೆಯೇ ಬೇಡ ಎಂದು ಹಸೆಮಣೆಯಿಂದ ಮೇಲೆದ್ದಾಳೆ.
ವಧು ಹೀಗೆ ಹೇಳುತ್ತಿದ್ದಂತೆಯೇ ಕೊಳಾಲದ ಕೆಸಿಎನ್ ಕನ್ವೆನ್ಷನ್ ಹಾಲ್ನಲ್ಲಿ ಮದುವೆ ಸಂಭ್ರಮದಲ್ಲಿ ನೆಂಟರು ಕ್ಷಣ ಹೌಹಾರಿದ್ದಾರೆ. ಅಲ್ಲೇ ಮದುವೆ ಮಂಟಪದಲ್ಲಿ ವಧು ಹಾಗೂ ವರನ ಕುಟುಂಬಸ್ಥರ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಇದೀಗ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಯಾವುದೇ ಕಾರಣಕ್ಕೂ ನಾನು ಮದುವೆಯಾಗುವುದಿಲ್ಲವೆಂದು ವಧು ಬಿಗಿಪಟ್ಟು ಹಿಡಿದಿದ್ದಾಳೆ. ಮತ್ತೊಂದೆಡೆ ಮದುವೆಗೆ ಲಕ್ಷಾಂತರ ರೂಪಾಯಿ ಖರ್ಚುಮಾಡಿದ್ದೇವೆ. ಈಗ ಮದುವೆ ಬೇಡ ಅಂದ್ರೆ ಹೇಗೆ ಎಂದು ವರನ ಕಡೆಯವರು ಆಕ್ರೋಶಗೊಂಡಿದ್ದಾರೆ.